ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು […]

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ
ಸಾಧು ಶ್ರೀನಾಥ್​

Updated on: Aug 18, 2020 | 11:10 AM

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು ಅವಕಾಶ ನೀಡಲಾಗಿದ್ದು, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದಾಗಿ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ.

ಈಗಾಗಲೇ BIECಯ ಐದು ಹಾಲ್​ಗಳಲ್ಲಿ 10,000 ಬೆಡ್​ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಲಾಗಿದ್ದು, ಸದ್ಯ BIECಯಲ್ಲಿ 6,000 ಬೆಡ್​ಗಳು ಸಂಪೂರ್ಣ ಸಿದ್ಧವಾಗಿವೆ. ಅದರಲ್ಲಿ 1,500 ಬೆಡ್​ಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಒಟ್ಟು 12 ಕೋವಿಡ್ ಕೇರ್ ಸೆಂಟರ್​ಗಳಲ್ಲಿ 4,576 ಬೆಡ್​ಗಳಿದ್ದು, ಅದರಲ್ಲಿ 2,966 ಬೆಡ್​ಗಳು ಭರ್ತಿಯಾಗಿವೆ. ಭರ್ತಿಯಾಗಿರುವ ಬೆಡ್​ಗಳಲ್ಲು ಸಹ 1,610 ಬೆಡ್​ಗಳ ರೋಗಿಗಳು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ. ಪ್ರತಿನಿತ್ಯ ಪತ್ತೆಯಾಗುವ ಸೋಂಕಿತರ ಪೈಕಿ ಶೇಕಡ 70ರಷ್ಟು ಜನ, ರೋಗಲಕ್ಷಣ ಇಲ್ಲದವರಾಗಿದ್ದಾರೆ. ಅವರಲ್ಲಿ ಶೇಕಡ 40-50 ರಷ್ಟು ಜನ, ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದಿಂದ ನಿರ್ಮಿಸಿರುವ ಕೋವಿಡ್​ ಕೇರ್​ ಸೆಂಟರ್​ಗಳ ಬೆಡ್​ಗಳು ಉಪಯೋಗಕ್ಕೆ ಬಾರದಂತಾಗಿವೆ.

Published On - 10:42 am, Tue, 18 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us