AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ