ರಕ್ಷಾ ಬಂಧನದ ದಿನ ವೃಕ್ಷಾ ಬಂಧನ.. ಸಸಿಗಳೊಂದಿಗೆ ಸೆಲ್ಫಿ!

ಧಾರವಾಡ: ಇಂದು ಎಲ್ಲೆಡೆ ರಕ್ಷಾ ಬಂಧನ ಸಂಭ್ರಮ. ಹೆಂಗಸರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಹಾಗೂ ಅವರಿಗೆ ಸಹೋದರರು ಗಿಫ್ಟ್ ಕೊಡುವ ಮೂಲಕ ಈ ಹಬ್ಬವನ್ನು ಸಂಭ್ರಮಿಸುತ್ತಾರೆ. ಆದರೆ ಇದೇ ದಿನದಂದು ಧಾರವಾಡದ ಅರಣ್ಯ ಇಲಾಖೆ ಹೊಸ ಕಾರ್ಯಕ್ರಮವನ್ನು ಆಯೋಜಿಸಿದೆ. ಸಸ್ಯ ಸಂರಕ್ಷಣೆಯ ಮಹತ್ವವನ್ನು ಮನಗಾಣಿಸಲು ಧಾರವಾಡ ಅರಣ್ಯ ವಿಭಾಗದ ವತಿಯಿಂದ ವೃಕ್ಷಾ ಬಂಧನ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಲಾಗಿದೆ. ಪ್ರತಿ ವರ್ಷ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಗುತ್ತದೆ. ನಂತರದ ದಿನಗಳಲ್ಲಿ […]

ರಕ್ಷಾ ಬಂಧನದ ದಿನ ವೃಕ್ಷಾ ಬಂಧನ.. ಸಸಿಗಳೊಂದಿಗೆ ಸೆಲ್ಫಿ!

Updated on: Aug 03, 2020 | 6:06 PM

ಧಾರವಾಡ: ಇಂದು ಎಲ್ಲೆಡೆ ರಕ್ಷಾ ಬಂಧನ ಸಂಭ್ರಮ. ಹೆಂಗಸರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಹಾಗೂ ಅವರಿಗೆ ಸಹೋದರರು ಗಿಫ್ಟ್ ಕೊಡುವ ಮೂಲಕ ಈ ಹಬ್ಬವನ್ನು ಸಂಭ್ರಮಿಸುತ್ತಾರೆ.

ಆದರೆ ಇದೇ ದಿನದಂದು ಧಾರವಾಡದ ಅರಣ್ಯ ಇಲಾಖೆ ಹೊಸ ಕಾರ್ಯಕ್ರಮವನ್ನು ಆಯೋಜಿಸಿದೆ. ಸಸ್ಯ ಸಂರಕ್ಷಣೆಯ ಮಹತ್ವವನ್ನು ಮನಗಾಣಿಸಲು ಧಾರವಾಡ ಅರಣ್ಯ ವಿಭಾಗದ ವತಿಯಿಂದ ವೃಕ್ಷಾ ಬಂಧನ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಲಾಗಿದೆ. ಪ್ರತಿ ವರ್ಷ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಗುತ್ತದೆ. ನಂತರದ ದಿನಗಳಲ್ಲಿ ಅವುಗಳ ರಕ್ಷಣೆಯ ವಿಚಾರ ಬಂದಾಗ ಯಾರೂ ಹೆಚ್ಚಿಗೆ ತಲೆ ಕೆಡಿಸಿಕೊಳ್ಳುವುದೇ ಇಲ್ಲ.

ಸಸಿಗಳೊಂದಿಗೆ ಸೆಲ್ಫಿ!
ಆದರೆ ಇದೀಗ ಅದರ ಮುಂದಿನ ಭಾಗವಾಗಿ ಈ ವೃಕ್ಷಾ ಬಂಧನ ಅನ್ನೋ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಪರಿಸರ ದಿನದಂದು ನೆಟ್ಟ ಗಿಡಗಳ ಪೋಷಣೆಗೆ ಜನರ ಪಾಲ್ಗೊಳ್ಳುವಿಕೆ ಉತ್ತೇಜಿಸಲು ಇಂಥದ್ದೊಂದು ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಇಲಾಖೆಯ ಹಿರಿಯ ಅಧಿಕಾರಿಗಳು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ , ರೇಡಿಯೋ ಮತ್ತಿತರ ಮಾಧ್ಯಮಗಳ ಮೂಲಕ ರಕ್ಷಾ ಬಂಧನದ ದಿನದಂದು ವೃಕ್ಷಾ ಬಂಧನ ಆಚರಿಸಲು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿದ ಅನೇಕರು ಇಂದು ಜಿಲ್ಲೆಯ ಹಲವೆಡೆ ವೃಕ್ಷಾ ಬಂಧನ ಆಚರಿಸಿ ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್ 5 ರಂದು ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಸಸಿಗಳೊಂದಿಗೆ ಸೆಲ್ಫಿ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಸಿ ನೆಡುವದಷ್ಟೇ ಅಲ್ಲ ಅದರ ರಕ್ಷಣೆ, ಪೋಷಣೆ ಅದಕ್ಕಿಂತಲೂ ಮುಖ್ಯ ಎನ್ನುವ ಜಾಗೃತಿ ಮೂಡಿಸಲು ಈ ವೃಕ್ಷಾ ಬಂಧನ ಸಹಕಾರಿಯಾಗಿದೆ.

ಗಿಡಗಳಿಗೆ ರಾಖಿ ಕಟ್ಟಿ ಈ ಕಾರ್ಯಕ್ರಮಕ್ಕೆ ಇಂದು ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರು ಸ್ಪಂದನೆ ನೀಡಿದ್ದಾರೆ. ಪರಿಸರದೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ವೃಕ್ಷಾ ಬಂಧನ ಒಂದು ವಿನೂತನ ಮಾರ್ಗವೆನಿಸಿರೋದಂತೂ ಸತ್ಯ.
-ನರಸಿಂಹಮೂರ್ತಿ ಪ್ಯಾಟಿ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us