ಉಕ್ಕಿ ಹರಿಯುತ್ತಿರುವ ಪಾಪನಾಶಿನಿ ನದಿ, ಮಠದಲ್ಲಿದ್ದ 21 ಹಸುಗಳ ಸ್ಥಳಾಂತರ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಪಾಪನಾಶಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಹೀಗಾಗಿ ಅದಮಾರು ಮಠದ ಜಮೀನಿನಲ್ಲಿದ್ದ 21 ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಡುಪಿ ಜಿಲ್ಲೆಯ ಪಾಪನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು, ಉಡುಪಿಯ ಉದ್ಯಾವರ ಗ್ರಾಮದ ವಿಭುದೇಶನಗರ ವ್ಯಾಪ್ತಿಯ ಅದಮಾರು ಮಠದ ಜಮೀನಿನಲ್ಲಿದ್ದ 21 ಹಸುಗಳನ್ನು ಮುಂಜಾಗೃತಾ ಕ್ರಮವಾಗಿ ಮಠದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಟೆಂಪೊ ಮೂಲಕ ಉಡುಪಿಗೆ ಸ್ಥಳಾಂತರಿಸಲಾಗಿದೆ.

ಉಕ್ಕಿ ಹರಿಯುತ್ತಿರುವ ಪಾಪನಾಶಿನಿ ನದಿ, ಮಠದಲ್ಲಿದ್ದ 21 ಹಸುಗಳ ಸ್ಥಳಾಂತರ
ಸಾಧು ಶ್ರೀನಾಥ್​ Edited By: Guru

Updated on: Aug 09, 2020 | 6:32 PM

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಪಾಪನಾಶಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಹೀಗಾಗಿ ಅದಮಾರು ಮಠದ ಜಮೀನಿನಲ್ಲಿದ್ದ 21 ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಉಡುಪಿ ಜಿಲ್ಲೆಯ ಪಾಪನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು, ಉಡುಪಿಯ ಉದ್ಯಾವರ ಗ್ರಾಮದ ವಿಭುದೇಶನಗರ ವ್ಯಾಪ್ತಿಯ ಅದಮಾರು ಮಠದ ಜಮೀನಿನಲ್ಲಿದ್ದ 21 ಹಸುಗಳನ್ನು ಮುಂಜಾಗೃತಾ ಕ್ರಮವಾಗಿ ಮಠದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಟೆಂಪೊ ಮೂಲಕ ಉಡುಪಿಗೆ ಸ್ಥಳಾಂತರಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us