AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೆಲ್ಲೂ ಹೋಗಲ್ಲ..ಇಲ್ಲೇ ಶೆಡ್ ​ಹಾಕಿಕೊಡಿ : ಪ್ರವಾಹದ ಭೀತಿಯ ಮಧ್ಯೆಯೂ ಗ್ರಾಮಸ್ಥರ ಹಠ

ಗದಗ:ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನವಿಲು ತೀರ್ಥ ಡ್ಯಾಂನಿಂದ 10 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಇದರಿಂದ ಜಿಲ್ಲಾಡಳಿತ ಪ್ರವಾಹಕ್ಕೆ ಒಳಗಾಗುವ ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರಿಸಲು ಚಿಂತನೆ ನಡೆಸಿದೆ. ಆದರೆ ಜಿಲ್ಲಾಡಳಿತದ ಕೆಲಸಕ್ಕೆ ಒಪ್ಪದ ಗ್ರಾಮಸ್ಥರು ನಾವು ಎಲ್ಲಿಗೂ ಹೋಗುವುದಿಲ್ಲವೆಂದು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ಲಕಮಾಪುರ ಗ್ರಾಮವು ಮಲಪ್ರಭಾ ನದಿಯ ಪ್ರವಾಹಕ್ಕೆ ತುತ್ತಾಗಿದ್ದು, ಈಗ ಇಲ್ಲಿನ ಗ್ರಾಮಸ್ಥರನ್ನು ಬೆಳ್ಳೇರಿಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ವ್ಯವಸ್ಥೆ […]

ನಾವೆಲ್ಲೂ ಹೋಗಲ್ಲ..ಇಲ್ಲೇ ಶೆಡ್ ​ಹಾಕಿಕೊಡಿ : ಪ್ರವಾಹದ ಭೀತಿಯ ಮಧ್ಯೆಯೂ ಗ್ರಾಮಸ್ಥರ ಹಠ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 16, 2020 | 1:22 PM

Share

ಗದಗ:ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನವಿಲು ತೀರ್ಥ ಡ್ಯಾಂನಿಂದ 10 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಇದರಿಂದ ಜಿಲ್ಲಾಡಳಿತ ಪ್ರವಾಹಕ್ಕೆ ಒಳಗಾಗುವ ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರಿಸಲು ಚಿಂತನೆ ನಡೆಸಿದೆ. ಆದರೆ ಜಿಲ್ಲಾಡಳಿತದ ಕೆಲಸಕ್ಕೆ ಒಪ್ಪದ ಗ್ರಾಮಸ್ಥರು ನಾವು ಎಲ್ಲಿಗೂ ಹೋಗುವುದಿಲ್ಲವೆಂದು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನರಗುಂದ ತಾಲೂಕಿನ ಲಕಮಾಪುರ ಗ್ರಾಮವು ಮಲಪ್ರಭಾ ನದಿಯ ಪ್ರವಾಹಕ್ಕೆ ತುತ್ತಾಗಿದ್ದು, ಈಗ ಇಲ್ಲಿನ ಗ್ರಾಮಸ್ಥರನ್ನು ಬೆಳ್ಳೇರಿಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಆದರೆ ಗ್ರಾಮಸ್ಥರು ಇದಕ್ಕೆ ಒಪ್ಪದೇ ನಮಗೆ ಇಲ್ಲಿಯೇ ಶೆಡ್​ ಹಾಕಿ ಕೊಡಿ. ನಾವು ಎಲ್ಲಿಗೂ ಹೋಗುವುದಿಲ್ಲವೆಂದು ಪ್ರತಿಭಟನೆ ನಡೆಸಿದ್ದಾರೆ.

ಹೀಗಾಗಿ ಲಖಮಾಪೂರ ಗ್ರಾಮಕ್ಕೆ ನರಗುಂದ ತಹಶಿಲ್ದಾರ ಮಹೇಂದ್ರ, ಡಿವೈಎಸ್ಪಿ ಗುರುನಾಥ್, ಎಎಸ್ಐ ಪವಾರ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ. ಆದರೆ ಗ್ರಾಮಸ್ಥರು ಕಳೆದ ವರ್ಷವೂ ನಮ್ಮ ಗ್ರಾಮ ಪ್ರವಾಹದಲ್ಲಿ ಮುಳುಗಿತ್ತು. ಆಗಲೂ ಸಹ ನಾವು ರಸ್ತೆ ಪಕ್ಕದಲ್ಲಿ ಗುಡಿಸಲು ಹಾಕಿ ಜೀವನ ಸಾಗಿಸಿದೆವು. ಇದರಿಂದ ಎಚ್ಚೆತ್ತುಕೊಳ್ಳದ ಸರ್ಕಾರ ನಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ನಾವು ಎಲ್ಲಿಗೂ ತೆರಳುವುದಿಲ್ಲ ಎಂದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಚಿವ ಸಿಸಿ ಪಾಟೀಲ್ ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ. ಜೊತೆಗೆ ನಾಳೆ ಒಳಗಾಗಿ ಶೆಡ್​ ನಿರ್ಮಿಸಿಕೊಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!