AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗ ಸಂಗೀತದ ಮೇರು ಪ್ರತಿಭೆ ‘ಹಾರ್ಮೋನಿಯಂ’ ಆರ್‌.ಪರಮಶಿವನ್ ನಿಧನ

‘ಹಾರ್ಮೋನಿಯಂ’ ಪರಮಶಿವನ್​ ಎಂದೇ ಖ್ಯಾತರಾಗಿದ್ದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಗೀತ ವಿದ್ವಾಂಸ ಆರ್. ಪರಮಶಿವನ್ (94) ಇಂದು (ಡಿ.31) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ರಂಗ ಸಂಗೀತದ ಮೇರು ಪ್ರತಿಭೆ ‘ಹಾರ್ಮೋನಿಯಂ’ ಆರ್‌.ಪರಮಶಿವನ್ ನಿಧನ
ಆರ್.ಪರಮಶಿವನ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 31, 2020 | 9:45 PM

Share

ಬೆಂಗಳೂರು: ‘ಹಾರ್ಮೋನಿಯಂ’ ಪರಮಶಿವನ್​ ಎಂದೇ ಖ್ಯಾತರಾಗಿದ್ದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಗೀತ ವಿದ್ವಾಂಸ ಆರ್. ಪರಮಶಿವನ್ (94) ಇಂದು (ಡಿ.31) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಹೆಂಡತಿ, ಮಗ ಮತ್ತು ಮಗಳು ಇದ್ದಾರೆ. ರಾಜಾಜಿನಗರದಲ್ಲಿರುವ ಸ್ವಗೃಹದಲ್ಲಿಯೇ ಪರಮಶಿವನ್​ ನಿಧನರಾದರು. ವಿದೇಶಗಳಲ್ಲಿರುವ ಮಗ ಮತ್ತು ಮಗಳು ನಾಳೆ ನಗರಕ್ಕೆ ಬರಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಡಾ.ರಾಜ್​ಕುಮಾರ್ ಅವರ ತಂದೆ ಪುಟ್ಟಸ್ವಾಮಯ್ಯ ಅವರಿಗೂ ಪರಮಶಿವನ್ ಆಪ್ತರಾಗಿದ್ದರು.

ಪರಮಶಿವನ್ ತಮ್ಮ 4ನೇ ವಯಸ್ಸಿನಲ್ಲಿ ಅಂದರೆ 1934ರಲ್ಲಿ ಮೊದಲ ಬಾರಿಗೆ ರಂಗಭೂಮಿಯಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿಯ ಎಂ.ಶಿವಪ್ಪ ಅವರ ಬಳಿ ಸಂಗೀತದ ಪ್ರಾಥಮಿಕ ಅಭ್ಯಾಸ ನಡೆಯಿತು. ಇವರ ಆಸಕ್ತಿ ಗುರುತಿಸಿದ್ದ ಮೈಸೂರು ಮಹಾರಾಜರ ಆಸ್ಥಾನ ವಿದ್ವಾನ್ ಡಾ.ಬಿ.ದೇವೇಂದ್ರಪ್ಪ ಅವರು ಮನೆಯಲ್ಲಿಟ್ಟುಕೊಂಡು ಊಟ ಹಾಕಿ ಸಂಗೀತದ ಉನ್ನತ ಅಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಹಿರಣ್ಣಯ್ಯ ಮಿತ್ರ ಮಂಡಳಿ, ಚಾಮುಂಡೇಶ್ವರಿ ನಾಟಕ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಹಾರ್ಮೋನಿಯಂ ನುಡಿಸುವ ಸಂಗೀತ ಮೇಷ್ಟ್ರ ಕೆಲಸದ ಜೊತೆಗೆ ಹಲವು ಪಾತ್ರಗಳನ್ನೂ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಇವರ ದನಿಯ ರಂಗಗೀತೆಗಳು ಇಂದಿಗೂ ಯೂಟ್ಯೂಬ್​ನಲ್ಲಿ ಹಿಟ್​ ಆಗಿವೆ.

Published On - 9:44 pm, Thu, 31 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ