AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗ ಸಂಗೀತದ ಮೇರು ಪ್ರತಿಭೆ ‘ಹಾರ್ಮೋನಿಯಂ’ ಆರ್‌.ಪರಮಶಿವನ್ ನಿಧನ

‘ಹಾರ್ಮೋನಿಯಂ’ ಪರಮಶಿವನ್​ ಎಂದೇ ಖ್ಯಾತರಾಗಿದ್ದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಗೀತ ವಿದ್ವಾಂಸ ಆರ್. ಪರಮಶಿವನ್ (94) ಇಂದು (ಡಿ.31) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ರಂಗ ಸಂಗೀತದ ಮೇರು ಪ್ರತಿಭೆ ‘ಹಾರ್ಮೋನಿಯಂ’ ಆರ್‌.ಪರಮಶಿವನ್ ನಿಧನ
ಆರ್.ಪರಮಶಿವನ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 31, 2020 | 9:45 PM

Share

ಬೆಂಗಳೂರು: ‘ಹಾರ್ಮೋನಿಯಂ’ ಪರಮಶಿವನ್​ ಎಂದೇ ಖ್ಯಾತರಾಗಿದ್ದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಗೀತ ವಿದ್ವಾಂಸ ಆರ್. ಪರಮಶಿವನ್ (94) ಇಂದು (ಡಿ.31) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಹೆಂಡತಿ, ಮಗ ಮತ್ತು ಮಗಳು ಇದ್ದಾರೆ. ರಾಜಾಜಿನಗರದಲ್ಲಿರುವ ಸ್ವಗೃಹದಲ್ಲಿಯೇ ಪರಮಶಿವನ್​ ನಿಧನರಾದರು. ವಿದೇಶಗಳಲ್ಲಿರುವ ಮಗ ಮತ್ತು ಮಗಳು ನಾಳೆ ನಗರಕ್ಕೆ ಬರಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಡಾ.ರಾಜ್​ಕುಮಾರ್ ಅವರ ತಂದೆ ಪುಟ್ಟಸ್ವಾಮಯ್ಯ ಅವರಿಗೂ ಪರಮಶಿವನ್ ಆಪ್ತರಾಗಿದ್ದರು.

ಪರಮಶಿವನ್ ತಮ್ಮ 4ನೇ ವಯಸ್ಸಿನಲ್ಲಿ ಅಂದರೆ 1934ರಲ್ಲಿ ಮೊದಲ ಬಾರಿಗೆ ರಂಗಭೂಮಿಯಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿಯ ಎಂ.ಶಿವಪ್ಪ ಅವರ ಬಳಿ ಸಂಗೀತದ ಪ್ರಾಥಮಿಕ ಅಭ್ಯಾಸ ನಡೆಯಿತು. ಇವರ ಆಸಕ್ತಿ ಗುರುತಿಸಿದ್ದ ಮೈಸೂರು ಮಹಾರಾಜರ ಆಸ್ಥಾನ ವಿದ್ವಾನ್ ಡಾ.ಬಿ.ದೇವೇಂದ್ರಪ್ಪ ಅವರು ಮನೆಯಲ್ಲಿಟ್ಟುಕೊಂಡು ಊಟ ಹಾಕಿ ಸಂಗೀತದ ಉನ್ನತ ಅಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಹಿರಣ್ಣಯ್ಯ ಮಿತ್ರ ಮಂಡಳಿ, ಚಾಮುಂಡೇಶ್ವರಿ ನಾಟಕ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಹಾರ್ಮೋನಿಯಂ ನುಡಿಸುವ ಸಂಗೀತ ಮೇಷ್ಟ್ರ ಕೆಲಸದ ಜೊತೆಗೆ ಹಲವು ಪಾತ್ರಗಳನ್ನೂ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಇವರ ದನಿಯ ರಂಗಗೀತೆಗಳು ಇಂದಿಗೂ ಯೂಟ್ಯೂಬ್​ನಲ್ಲಿ ಹಿಟ್​ ಆಗಿವೆ.

Published On - 9:44 pm, Thu, 31 December 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು