ದೇಗುಲದಲ್ಲಿ ಕಳ್ಳತನ: ಶಬ್ದ ಕೇಳಿ ಅರ್ಚಕರು ಕೂಗಿಕೊಂಡ್ರೂ ನಡೆದೇ ಹೋಯ್ತು ದುಷ್ಕೃತ್ಯ, ಎಲ್ಲಿ?

ಉತ್ತರ ಕನ್ನಡ: ದೇವಸ್ಥಾನದ ಬೀಗ ಮುರಿದು, ಕಳ್ಳತನ ಮಾಡಿರುವ ಘಟನೆ  ಜಿಲ್ಲೆಯ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇವಾಲಯದಲ್ಲಿ ನಡೆದಿದೆ. ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇಗುಲದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಹತ್ತು ಲಕ್ಷ  ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ದೇವರ ಕವಚವನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಶಬ್ದ ಕೇಳಿದ ಕೂಡಲೆ ದೇವಸ್ಥಾನದ ಅರ್ಚಕರು ಕೂಗಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ದೇಗುಲದಲ್ಲಿ ಕಳ್ಳತನ: ಶಬ್ದ ಕೇಳಿ ಅರ್ಚಕರು ಕೂಗಿಕೊಂಡ್ರೂ ನಡೆದೇ ಹೋಯ್ತು ದುಷ್ಕೃತ್ಯ, ಎಲ್ಲಿ?
ಸಾಧು ಶ್ರೀನಾಥ್​

Updated on: Aug 16, 2020 | 12:28 PM

ಉತ್ತರ ಕನ್ನಡ: ದೇವಸ್ಥಾನದ ಬೀಗ ಮುರಿದು, ಕಳ್ಳತನ ಮಾಡಿರುವ ಘಟನೆ  ಜಿಲ್ಲೆಯ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇವಾಲಯದಲ್ಲಿ ನಡೆದಿದೆ.

ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇಗುಲದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಹತ್ತು ಲಕ್ಷ  ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ದೇವರ ಕವಚವನ್ನು ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಶಬ್ದ ಕೇಳಿದ ಕೂಡಲೆ ದೇವಸ್ಥಾನದ ಅರ್ಚಕರು ಕೂಗಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ, ತನಿಖೆ ಚುರುಕುಗೊಳಿಸಿದ್ದಾರೆ.

Published On - 12:26 pm, Sun, 16 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us