ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ […]

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?
ಸಾಧು ಶ್ರೀನಾಥ್​ Edited By:

Updated on: Jul 27, 2020 | 10:16 PM

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ ಮೃತಪಟ್ಟಿದ್ದು.

ಕುಟುಂಬಸ್ಥರು ಬಿಬಿಎಂಪಿ ಸಹಾಯವಾಣಿಗೆ ಎಷ್ಟೇ ಕರೆ ಮಾಡಿದರು ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಹೀಗಾಗಿ ಮೃತರ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು 5 ಗಂಟೆಯಿಂದ ಅಂಬುಲೆನ್ಸ್ ಕಾಗಿ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ ಎದುರಾಗಿದೆ.

Published On - 1:31 pm, Mon, 27 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us