AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಎಲೆಕ್ಷನ್ ಬರಲ್ಲ, ಸರ್ಕಾರ ಉಳಿಸಕ್ಕೆ ಏನ್ ಬೇಕೋ ಅದನ್ನ ಮಾಡ್ತೇನೆ’

ಬಳ್ಳಾರಿ: ರಾಜ್ಯದಲ್ಲಿ ಉಪಚುನಾವಣೆ ರಂಗೇರಿದ್ದು, ಡಿ. 9ರ ಫಲಿತಾಂಶದ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಅತಂತ್ರವಾದ್ರೆ ಚುನಾವಣೆ ಬಳಿಕ BJPಗೆ JDS​ ಬೆಂಬಲ ನೀಡಲ್ಲ, ಜೆಡಿಎಸ್​ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗ್ಗೆಯಷ್ಟೇ ಭವಿಷ್ಯ ನುಡಿದಿದ್ದರು. ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ:  ಇದಕ್ಕೆ ಪ್ರತ್ಯುತ್ತರವೆಂಬಂತೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ. ಸರ್ಕಾರ ಉಳಿಸಲಿಕ್ಕೆ ಏನು ಮಾಡಬೇಕೋ […]

‘ಮತ್ತೆ ಎಲೆಕ್ಷನ್ ಬರಲ್ಲ, ಸರ್ಕಾರ ಉಳಿಸಕ್ಕೆ ಏನ್ ಬೇಕೋ ಅದನ್ನ ಮಾಡ್ತೇನೆ’
ಸಾಧು ಶ್ರೀನಾಥ್​
|

Updated on: Nov 25, 2019 | 3:55 PM

Share

ಬಳ್ಳಾರಿ: ರಾಜ್ಯದಲ್ಲಿ ಉಪಚುನಾವಣೆ ರಂಗೇರಿದ್ದು, ಡಿ. 9ರ ಫಲಿತಾಂಶದ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಅತಂತ್ರವಾದ್ರೆ ಚುನಾವಣೆ ಬಳಿಕ BJPಗೆ JDS​ ಬೆಂಬಲ ನೀಡಲ್ಲ, ಜೆಡಿಎಸ್​ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗ್ಗೆಯಷ್ಟೇ ಭವಿಷ್ಯ ನುಡಿದಿದ್ದರು.

ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ:  ಇದಕ್ಕೆ ಪ್ರತ್ಯುತ್ತರವೆಂಬಂತೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ. ಸರ್ಕಾರ ಉಳಿಸಲಿಕ್ಕೆ ಏನು ಮಾಡಬೇಕೋ ಅದನ್ನು ನಾನು ಮಾಡುತ್ತೇನೆ ಎಂದು ತೀಕ್ಷ್ಣವಾಗಿ ನುಡಿದಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ಗಿಂತ ಹೆಚ್ಚಿನ ಸ್ಥಾನ ಜೆಡಿಎಸ್​ಗೆ ಬರುವ ವಾತಾವರಣವಿದೆ. ರಾಜ್ಯದಲ್ಲಿ ಸರ್ಕಾರ ಮುಂದುವರಿಯುತ್ತೆ, ಯಾವ ರೀತಿ ಎಂದು ಈಗ ಹೇಳುವುದಿಲ್ಲ ಮುಂದೆ ಹೇಳುತ್ತೇನೆ ಎಂದರು.

ಯಡಿಯೂರಪ್ಪ ಭ್ರಮಾಲೋಕದಲ್ಲಿಯೇ ಇರಲಿ:  ಹೊಸಪೇಟೆಯ ಕಮಲಾಪುರದಲ್ಲಿ ಜೆಡಿಎಸ್​ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಘಟನೆಯೇ ಬೇರೆ, ಈಗಿನ ವಿಧಾನಸಭೆ ಉಪಚುನಾವಣೆ ಘಟನೆಯೇ ಬೇರೆ. ಆಗ ಮೋದಿ ನೋಡಿ ವೋಟು ಹಾಕಿದ್ದರು. ಇದೀಗ ಅದೇ ಜನರು ಬಿಜೆಪಿಯನ್ನ ವಿರೋಧಿಸಿದ್ದಾರೆ. ಅವರ ಭವಿಷ್ಯವೆಲ್ಲ ನಿಜವಾಗುತ್ತೆ ಎಂದುಕೊಂಡಿದ್ದಾರೆ. ಯಡಿಯೂರಪ್ಪ ಭ್ರಮಾಲೋಕದಲ್ಲಿಯೇ ಇರಲಿ ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ