‘ಮತ್ತೆ ಎಲೆಕ್ಷನ್ ಬರಲ್ಲ, ಸರ್ಕಾರ ಉಳಿಸಕ್ಕೆ ಏನ್ ಬೇಕೋ ಅದನ್ನ ಮಾಡ್ತೇನೆ’

ಬಳ್ಳಾರಿ: ರಾಜ್ಯದಲ್ಲಿ ಉಪಚುನಾವಣೆ ರಂಗೇರಿದ್ದು, ಡಿ. 9ರ ಫಲಿತಾಂಶದ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಅತಂತ್ರವಾದ್ರೆ ಚುನಾವಣೆ ಬಳಿಕ BJPಗೆ JDS​ ಬೆಂಬಲ ನೀಡಲ್ಲ, ಜೆಡಿಎಸ್​ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗ್ಗೆಯಷ್ಟೇ ಭವಿಷ್ಯ ನುಡಿದಿದ್ದರು. ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ:  ಇದಕ್ಕೆ ಪ್ರತ್ಯುತ್ತರವೆಂಬಂತೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ. ಸರ್ಕಾರ ಉಳಿಸಲಿಕ್ಕೆ ಏನು ಮಾಡಬೇಕೋ […]

‘ಮತ್ತೆ ಎಲೆಕ್ಷನ್ ಬರಲ್ಲ, ಸರ್ಕಾರ ಉಳಿಸಕ್ಕೆ ಏನ್ ಬೇಕೋ ಅದನ್ನ ಮಾಡ್ತೇನೆ’
ಸಾಧು ಶ್ರೀನಾಥ್​

Updated on: Nov 25, 2019 | 3:55 PM

ಬಳ್ಳಾರಿ: ರಾಜ್ಯದಲ್ಲಿ ಉಪಚುನಾವಣೆ ರಂಗೇರಿದ್ದು, ಡಿ. 9ರ ಫಲಿತಾಂಶದ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಅತಂತ್ರವಾದ್ರೆ ಚುನಾವಣೆ ಬಳಿಕ BJPಗೆ JDS​ ಬೆಂಬಲ ನೀಡಲ್ಲ, ಜೆಡಿಎಸ್​ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗ್ಗೆಯಷ್ಟೇ ಭವಿಷ್ಯ ನುಡಿದಿದ್ದರು.

ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ: 
ಇದಕ್ಕೆ ಪ್ರತ್ಯುತ್ತರವೆಂಬಂತೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಸಾರ್ವತ್ರಿಕ ಚುನಾವಣೆ ಬರುವುದಿಲ್ಲ. ಸರ್ಕಾರ ಉಳಿಸಲಿಕ್ಕೆ ಏನು ಮಾಡಬೇಕೋ ಅದನ್ನು ನಾನು ಮಾಡುತ್ತೇನೆ ಎಂದು ತೀಕ್ಷ್ಣವಾಗಿ ನುಡಿದಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ಗಿಂತ ಹೆಚ್ಚಿನ ಸ್ಥಾನ ಜೆಡಿಎಸ್​ಗೆ ಬರುವ ವಾತಾವರಣವಿದೆ. ರಾಜ್ಯದಲ್ಲಿ ಸರ್ಕಾರ ಮುಂದುವರಿಯುತ್ತೆ, ಯಾವ ರೀತಿ ಎಂದು ಈಗ ಹೇಳುವುದಿಲ್ಲ ಮುಂದೆ ಹೇಳುತ್ತೇನೆ ಎಂದರು.

ಯಡಿಯೂರಪ್ಪ ಭ್ರಮಾಲೋಕದಲ್ಲಿಯೇ ಇರಲಿ: 
ಹೊಸಪೇಟೆಯ ಕಮಲಾಪುರದಲ್ಲಿ ಜೆಡಿಎಸ್​ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಘಟನೆಯೇ ಬೇರೆ, ಈಗಿನ ವಿಧಾನಸಭೆ ಉಪಚುನಾವಣೆ ಘಟನೆಯೇ ಬೇರೆ. ಆಗ ಮೋದಿ ನೋಡಿ ವೋಟು ಹಾಕಿದ್ದರು. ಇದೀಗ ಅದೇ ಜನರು ಬಿಜೆಪಿಯನ್ನ ವಿರೋಧಿಸಿದ್ದಾರೆ. ಅವರ ಭವಿಷ್ಯವೆಲ್ಲ ನಿಜವಾಗುತ್ತೆ ಎಂದುಕೊಂಡಿದ್ದಾರೆ. ಯಡಿಯೂರಪ್ಪ ಭ್ರಮಾಲೋಕದಲ್ಲಿಯೇ ಇರಲಿ ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us