ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ […]

ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?
ಸಾಧು ಶ್ರೀನಾಥ್​

Updated on: Apr 17, 2020 | 1:12 PM

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ ಕಾಂಟ್ರಾಕ್ಟ್ ಪಡೆದು ಸ್ಯಾನಿಟೈಸ್ ಮಾಡಿದ ಬಸ್ ಅನ್ನು ನೀಡುತ್ತೇವೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಇನ್ನು ಎಷ್ಟು ದಿನ ಮುಂದುವರಿಯುತ್ತದೋ ಗೊತ್ತಿಲ್ಲ.

ಕೊರೊನಾ ವೈರಸ್ ನಿಯಂತ್ರಣಕ್ಕೆ ರ್ಯಾಪಿಡ್ ಟೆಸ್ಟ್ ಕಿಟ್​ಗಳು ಚೀನಾದಿಂದ ಬರಬೇಕಿದೆ. ಎರಡು ಲಕ್ಷ ಕಿಟ್ ಆರ್ಡರ್ ಮಾಡಿದ್ದೇವೆ. ಈ ತಿಂಗಳ ಅಂತ್ಯಕ್ಕೆ ಒಂದಿಷ್ಟು ಕಿಟ್ ಬರಲಿದೆ. ಬಾಕಿ ಉಳಿದ ಕಿಟ್​ಗಳು ನಂತರ ಬರುತ್ತವೆ ಎಂದು ಡಿಸಿಎಂ ತಿಳಿಸಿದರು.

Published On - 12:19 pm, Fri, 17 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us