ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ.

ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ
ಕಳ್ಳನಿಗೆ ಸಾರ್ವಜನಿಕರಿಂದ ಧರ್ಮದೇಟು
Follow us
|

Updated on:Mar 03, 2021 | 8:03 AM

ಮಂಡ್ಯ: ಕಳ್ಳತನಕ್ಕೆ ಯತ್ನಿಸಿದ್ದವರಿಗೆ ಹಿಗ್ಗಾಮುಗ್ಗ ಬಾರಿಸಿ ಬೆಂಡೆತ್ತಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಮೂಲದ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಸಿಕ್ಕಿಬಿದ್ದ ಕಳ್ಳರು. ಸಾರ್ವಜನಿಕರು ಸಿಕ್ಕಿ ಬಿದ್ದ ಕಳ್ಳರಿಗೆ ಧರ್ಮದೇಟು ಕೊಟ್ಟಿದ್ದು ಇಬ್ಬರು ಕಳ್ಳರ ಪೈಕಿ ಒಬ್ಬ ಕಳ್ಳ ಚಾಕು ತಿವಿದುಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದಾನೆ.

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ. ಕಳ್ಳರು ಮನೆಗೆ ನುಗ್ಗಿರೋದನ್ನು ನೋಡಿ ಕೂಗಿಕೊಂಡಿದ್ದಾನೆ. ತಕ್ಷಣ ಸುತ್ತುವರಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವೇಳೆ ಸಲೀಂ ಉಲ್ಲಾ ಖಾನ್ ಸ್ವಯಂ ಚಾಕು ಇರಿದುಕೊಂಡು ತೀವ್ರ ಅಸ್ವಸ್ಥನಾಗಿದ್ದಾನೆ.

ಸಾರ್ವಜನಿಕರಿಂದ ಧರ್ಮದೇಟು ತಿಂದ ಮತ್ತೋರ್ವ ಖದೀಮ ಜಬಿ ಉಲ್ಲಾಗೂ ತೀವ್ರ ಗಾಯಗಳಾಗಿವೆ. ಸದ್ಯ ಕಳ್ಳರಿಬ್ಬರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mandya Thief

ಜಬಿ ಉಲ್ಲಾ

ಇದನ್ನೂ ಓದಿ: ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Published On - 7:59 am, Wed, 3 March 21

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ