ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ: ಮೂವರ ಬರ್ಬರ ಕೊಲೆ, ಹುಂಡಿ ಕದ್ದೊಯ್ದ ದುಷ್ಕರ್ಮಿಗಳು
ಮಂಡ್ಯ: ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಡ್ಯದ ಗುತ್ತಲು ಬಳಿಯ ಅರ್ಕೇಶ್ವರ ದೇಗುಲದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ. ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಗಣೇಶ, ಪ್ರಕಾಶ್ ಮತ್ತು ಆನಂದ ಕೊಲೆಯಾದ ದುರ್ದೈವಿಗಳು. ಈ ಮೂವರನ್ನೂ ಹತ್ಯೆಗೈದ ದುಷ್ಕರ್ಮಿಗಳು ಹುಂಡಿಯನ್ನು ಕದ್ದೊಯ್ದಿದ್ದಾರೆ. ಪಾತಕಿಗಳು ಹುಂಡಿಯನ್ನು ದೇವಾಲಯದ ಹೊರಗೆ ಬಿಸಾಡಿದ್ದಾರೆ. ಹುಂಡಿ ಹಣಕ್ಕಾಗಿ […]

ಮಂಡ್ಯ: ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಡ್ಯದ ಗುತ್ತಲು ಬಳಿಯ ಅರ್ಕೇಶ್ವರ ದೇಗುಲದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ.
ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಗಣೇಶ, ಪ್ರಕಾಶ್ ಮತ್ತು ಆನಂದ ಕೊಲೆಯಾದ ದುರ್ದೈವಿಗಳು. ಈ ಮೂವರನ್ನೂ ಹತ್ಯೆಗೈದ ದುಷ್ಕರ್ಮಿಗಳು ಹುಂಡಿಯನ್ನು ಕದ್ದೊಯ್ದಿದ್ದಾರೆ. ಪಾತಕಿಗಳು ಹುಂಡಿಯನ್ನು ದೇವಾಲಯದ ಹೊರಗೆ ಬಿಸಾಡಿದ್ದಾರೆ. ಹುಂಡಿ ಹಣಕ್ಕಾಗಿ ಈ ಕೊಲೆಗಳು ನಡೆದಿವೆ ಎಂದು ಶಂಕಿಸಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. (2/2)
— CM of Karnataka (@CMofKarnataka) September 11, 2020
Published On - 9:27 am, Fri, 11 September 20