AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೀ ಪಾಪಿಗಳು.. ಮೃತ ಮಹಿಳೆಯ ಚಿನ್ನದ ಸರ ಕೂಡಾ ಬಿಡಲಿಲ್ಲ

ಮೈಸೂರು: ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಕಳವು ಆಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 13ರಂದು ಜಿಲ್ಲೆಯ ಮೇಟಗಳ್ಳಿ ಆಸ್ಪತ್ರೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 56 ವರ್ಷದ ಮೈಸೂರಿನ ವಿದ್ಯಾ ನಗರದ ನಿವಾಸಿಯಾಗಿದ್ದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದರು. ಹೀಗಾಗಿ, ಮಹಿಳೆಯನ್ನ ಮೇಟಗಳ್ಳಿ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತು. ಆದರೆ, ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ […]

ಛೀ ಪಾಪಿಗಳು.. ಮೃತ ಮಹಿಳೆಯ ಚಿನ್ನದ ಸರ ಕೂಡಾ ಬಿಡಲಿಲ್ಲ
KUSHAL V
| Edited By: |

Updated on: Aug 18, 2020 | 10:52 AM

Share

ಮೈಸೂರು: ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಕಳವು ಆಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 13ರಂದು ಜಿಲ್ಲೆಯ ಮೇಟಗಳ್ಳಿ ಆಸ್ಪತ್ರೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

56 ವರ್ಷದ ಮೈಸೂರಿನ ವಿದ್ಯಾ ನಗರದ ನಿವಾಸಿಯಾಗಿದ್ದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದರು. ಹೀಗಾಗಿ, ಮಹಿಳೆಯನ್ನ ಮೇಟಗಳ್ಳಿ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತು. ಆದರೆ, ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಮಹಿಳೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಕೊರೊನಾ ಟೆಸ್ಟ್ ಬಳಿಕ ಮಹಿಳೆಯ ಕುಟುಂಬಕ್ಕೆ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನ ಹಸ್ತಾಂತರಿಸಿದ್ದರು. ಈ ವೇಳೆ ಮೃತಳ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಪತ್ತೆಯಾಗಿಲ್ಲ. ಆದ್ದರಿಂದ ಆಕೆಯ ಸರವನ್ನು ಯಾರೋ ಕದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಕುರಿತು ಆಸ್ಪತ್ರೆಯ ಮುಖ್ಯಸ್ಥರಿಗೂ ಮೃತ ಮಹಿಳೆಯ ಪುತ್ರ ರವೀಶ್ ದೂರು ನೀಡಿದ್ದಾರೆ. ಅವರಿಂದ ಇದುವರೆಗೂ ಯಾವುದೇ ಪ್ರತಿಕ್ರಿಯಿ ಸಿಕ್ಕಿಲ್ಲವಂತೆ. ಜೊತೆಗೆ, ಮೃತಳ ಕುಟುಂಬದ ಐವರಿಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಹ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಗಾಗಿ, ರವೀಶ್​ ಪೊಲೀಸ್ ಠಾಣೆಗೆ ದೂರು ನೀಡಲು ಕೂಡ ಸಾಧ್ಯವಾಗಿಲ್ಲವಂತೆ. ಸದ್ಯ, ರವೀಶ್ ಮೇಟಗಳ್ಳಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ