AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೀ ಪಾಪಿಗಳು.. ಮೃತ ಮಹಿಳೆಯ ಚಿನ್ನದ ಸರ ಕೂಡಾ ಬಿಡಲಿಲ್ಲ

ಮೈಸೂರು: ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಕಳವು ಆಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 13ರಂದು ಜಿಲ್ಲೆಯ ಮೇಟಗಳ್ಳಿ ಆಸ್ಪತ್ರೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 56 ವರ್ಷದ ಮೈಸೂರಿನ ವಿದ್ಯಾ ನಗರದ ನಿವಾಸಿಯಾಗಿದ್ದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದರು. ಹೀಗಾಗಿ, ಮಹಿಳೆಯನ್ನ ಮೇಟಗಳ್ಳಿ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತು. ಆದರೆ, ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ […]

ಛೀ ಪಾಪಿಗಳು.. ಮೃತ ಮಹಿಳೆಯ ಚಿನ್ನದ ಸರ ಕೂಡಾ ಬಿಡಲಿಲ್ಲ
KUSHAL V
| Edited By: |

Updated on: Aug 18, 2020 | 10:52 AM

Share

ಮೈಸೂರು: ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಕಳವು ಆಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 13ರಂದು ಜಿಲ್ಲೆಯ ಮೇಟಗಳ್ಳಿ ಆಸ್ಪತ್ರೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

56 ವರ್ಷದ ಮೈಸೂರಿನ ವಿದ್ಯಾ ನಗರದ ನಿವಾಸಿಯಾಗಿದ್ದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದರು. ಹೀಗಾಗಿ, ಮಹಿಳೆಯನ್ನ ಮೇಟಗಳ್ಳಿ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತು. ಆದರೆ, ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಮಹಿಳೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಕೊರೊನಾ ಟೆಸ್ಟ್ ಬಳಿಕ ಮಹಿಳೆಯ ಕುಟುಂಬಕ್ಕೆ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನ ಹಸ್ತಾಂತರಿಸಿದ್ದರು. ಈ ವೇಳೆ ಮೃತಳ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಪತ್ತೆಯಾಗಿಲ್ಲ. ಆದ್ದರಿಂದ ಆಕೆಯ ಸರವನ್ನು ಯಾರೋ ಕದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಕುರಿತು ಆಸ್ಪತ್ರೆಯ ಮುಖ್ಯಸ್ಥರಿಗೂ ಮೃತ ಮಹಿಳೆಯ ಪುತ್ರ ರವೀಶ್ ದೂರು ನೀಡಿದ್ದಾರೆ. ಅವರಿಂದ ಇದುವರೆಗೂ ಯಾವುದೇ ಪ್ರತಿಕ್ರಿಯಿ ಸಿಕ್ಕಿಲ್ಲವಂತೆ. ಜೊತೆಗೆ, ಮೃತಳ ಕುಟುಂಬದ ಐವರಿಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಹ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಗಾಗಿ, ರವೀಶ್​ ಪೊಲೀಸ್ ಠಾಣೆಗೆ ದೂರು ನೀಡಲು ಕೂಡ ಸಾಧ್ಯವಾಗಿಲ್ಲವಂತೆ. ಸದ್ಯ, ರವೀಶ್ ಮೇಟಗಳ್ಳಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?