AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಅಭಿಮಾನಿಗಳಿಗಾದ್ರೂ ಐಪಿಎಲ್ ಟ್ರೋಫಿ ಒಮ್ಮೆ ಗೆಲ್ರಯ್ಯ! | This hotelier is a diehard fan of RCB

ಅಭಿಮಾನವೆಂದರೆ ಪ್ರಾಯಶಃ ಇದೇ ಇರಬೇಕು. ಇಲ್ಲಿರುವ ಬ್ಯಾನರ್ ಮೇಲೆ ಬರೆದಿರುವುದನ್ನು ಓದಿದರೆ ನಾವು ಏನು ಹೇಳಲು ಪ್ರಯತ್ನಿಸುತ್ತಿದ್ದೇವೆನ್ನುವುದು ನಿಮಗೆ ಅರ್ಥವಾಗುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿಗೆ ಕೋಟ್ಯಾಂತರ ಅಭಿಮಾನಿಗಳಿರಬಹುದು, ಅದರೆ ಇವರಂಥ ಅಭಿಮಾನಿ ಪ್ರಾಯಶಃ ಇರಲಾರರು. ಮೈಸೂರಿನವರಿಗೆ ಇವರ ಬಗ್ಗೆ ಚೆನ್ನಾಗಿ ಗೊತ್ತಿರುತ್ತದೆ, ಈ ಅಭಿಮಾನಿ ಅಲ್ಲಿ ‘ನಾಟಿ ಹಟ್’ ಹೆಸರಿನ ಮಾಂಸಾಹಾರಿ ಹೋಟೆಲೊಂದನ್ನು ನಡೆಸುತ್ತಿದ್ದಾರೆ. ಆರ್​ಸಿಬಿ ಟೀಮನ್ನು ಇವರು (ಹೆಸರು ಹೇಳಿಕೊಂಡಿಲ್ಲ) ಐಪಿಎಲ್ ಟೂರ್ನಿ ಆರಂಭವಾದಾಗಿನಿಂದಲೂ ಬೆಂಬಲಿಸುತ್ತಾ ಬಂದಿದ್ದಾರೆ. ಆರ್​ಸಿಬಿಯ ಪಂದ್ಯ ನಡೆಯುವ ದಿನಗಳಂದು ತಮ್ಮ […]

ಇಂಥ ಅಭಿಮಾನಿಗಳಿಗಾದ್ರೂ ಐಪಿಎಲ್ ಟ್ರೋಫಿ ಒಮ್ಮೆ ಗೆಲ್ರಯ್ಯ! | This hotelier is a diehard fan of RCB
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 07, 2020 | 8:43 PM

Share

ಅಭಿಮಾನವೆಂದರೆ ಪ್ರಾಯಶಃ ಇದೇ ಇರಬೇಕು.

ಇಲ್ಲಿರುವ ಬ್ಯಾನರ್ ಮೇಲೆ ಬರೆದಿರುವುದನ್ನು ಓದಿದರೆ ನಾವು ಏನು ಹೇಳಲು ಪ್ರಯತ್ನಿಸುತ್ತಿದ್ದೇವೆನ್ನುವುದು ನಿಮಗೆ ಅರ್ಥವಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿಗೆ ಕೋಟ್ಯಾಂತರ ಅಭಿಮಾನಿಗಳಿರಬಹುದು, ಅದರೆ ಇವರಂಥ ಅಭಿಮಾನಿ ಪ್ರಾಯಶಃ ಇರಲಾರರು.

ಮೈಸೂರಿನವರಿಗೆ ಇವರ ಬಗ್ಗೆ ಚೆನ್ನಾಗಿ ಗೊತ್ತಿರುತ್ತದೆ, ಈ ಅಭಿಮಾನಿ ಅಲ್ಲಿ ‘ನಾಟಿ ಹಟ್’ ಹೆಸರಿನ ಮಾಂಸಾಹಾರಿ ಹೋಟೆಲೊಂದನ್ನು ನಡೆಸುತ್ತಿದ್ದಾರೆ. ಆರ್​ಸಿಬಿ ಟೀಮನ್ನು ಇವರು (ಹೆಸರು ಹೇಳಿಕೊಂಡಿಲ್ಲ) ಐಪಿಎಲ್ ಟೂರ್ನಿ ಆರಂಭವಾದಾಗಿನಿಂದಲೂ ಬೆಂಬಲಿಸುತ್ತಾ ಬಂದಿದ್ದಾರೆ. ಆರ್​ಸಿಬಿಯ ಪಂದ್ಯ ನಡೆಯುವ ದಿನಗಳಂದು ತಮ್ಮ ಹೊಟೇಲಿನಲ್ಲಿ ದೊರೆಯುವ ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಮಟನ್ ಚಾಪ್ಸ್ ಮತ್ತಿತರ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಅರ್ಧದಷ್ಟು ಬೆಲೆಗೆ ನೀಡುತ್ತಾರೆ. ಅವತ್ತಿನ ದಿನ ಹೊಟೇಲ್ ಮುಂದೆ, ‘ಆರ್​ಸಿಬಿ ಪಂದ್ಯದ ಪ್ರಯುಕ್ತ ನಮ್ಮಲ್ಲಿ ದೊರೆಯುವ ಆಹಾರ ಪದಾರ್ಥಗಳನನ್ನು ಕೇವಲ ಅರ್ಧ ಬೆಲೆಯಲ್ಲಿ ಸವಿಯಿರಿ’ ಎಂದು ಸೂಚಿಸುವ ಬ್ಯಾನರನ್ನು ನೇತು ಹಾಕುತ್ತಾರೆ.

ವಿರಾಟ್ ಕೊಹ್ಲಿಯ ಟೀಮು ಪಂದ್ಯ ಗೆದ್ದರೆ ಇತರ ಅಭಿಮಾನಿಗಳು ಸಂತೋಷಪಡುವಂತೆ ಅವರು ಸಹ ಆಕಾಶದಲ್ಲಿ ತೇಲಾಡುತ್ತಾರೆ. ಅದರೆ ಸೋತರೆ ಉಳಿದವರಿಗಿಂತ ಜಾಸ್ತಿ ಬೇಜಾರು ಮಾಡಿಕೊಳ್ಳುತ್ತಾರೆ. ಶುಕ್ರವಾರದಂದು ಎಲಿಮಿನೇಟರ್ ಸುತ್ತಿನಲ್ಲಿ ಆರ್​ಸಿಬಿ ಸನ್​ರೈಸರ್ಸ್ ಹೈದರಾಬಾದ್​ಗೆ ಸೋತು ಟೂರ್ನಿಯಿಂದ ನಿರ್ಗಮಿಸಿದ ನಂತರ ಇವರು ಯಾವ ಪರಿ ಬೇಜಾರು ಮಾಡಿಕೊಂಡಿದ್ದಾರೆಂದರೆ ಆ ನಿರಾಶೆಯಲ್ಲಿ ತಮ್ಮ ಹೊಟೇಲನ್ನೇ ಮುಚ್ಚಿಬಿಟ್ಟು ಹೊಟೇಲಿನ ಮುಂದೆ ಈ ಬ್ಯಾನರನ್ನು ಇಳಿಬಿಟ್ಟಿದ್ದಾರೆ! ಕೊನೆಯಲ್ಲಿ ಅವರು ‘ಈಗಲೂ ಆರ್​ಸಿಬಿ ಅಭಿಮಾನಿ’ ಅಂತ ಹೇಳಿರುವುದು ಮನಮುಟ್ಟುವಂತಿದೆ.

ಐಪಿಎಲ್ ಟೂರ್ನಿಯಿಂದ ಆರ್​ಸಿಬಿ ತಂಡ ಹೊರಬಿದ್ದ ಹಿನ್ನೆಲೆಯಲ್ಲಿ ಇಂದು ಹೊಟೇಲ್​ಗೆ ರಜೆ ಘೋಷಿಸಲಾಗಿದೆ.

ಇಂತಿ ಮಾಲಿಕರು (ಈಗಲೂ ಆರ್​ಸಿಬಿ ಅಭಿಮಾನಿ)……

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ