AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆಗಳಿಗೂ ಕೊರೊನಾ ಪರೀಕ್ಷೆ: ಈ ಬಾರಿ ಅಂಬಾರಿ ಹೊರುವವರು ಯಾರು?

ಮೈಸೂರು: ಕೊರೊನಾ ಆತಂಕದ ನಡುವೆಯೇ ಈ ವರ್ಷ ಕಳೆದುಹೋಗಿದೆ. ಈ ಮಧ್ಯೆ ದಸರಾ ಹಬ್ಬಕ್ಕೂ ಕೊರೊನಾ ಸೋಂಕು ಅಡ್ಡಿಯಾಗಿದ್ದು, ಇಷ್ಟೆಲ್ಲಾ ಅಡ್ಡಿ ಆತಂಕಗಳ ನಡುವೆ ಜಂಬೂಸವಾರಿ ನಡೆಸಲು ಸಿದ್ಧತೆ ನಡೆದಿದೆ. ಮೊದಲಿಗೆ ಅಂಬಾರಿ ಹೊರಲು ಆನೆ ಆಯ್ಕೆ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದರು, ಆದರೆ ಸದ್ಯದ ಪರಿಸ್ಥಿತಿಯಲ್ಲಿ ಗಜರಾಯನಿಗೂ ಕೊರೊನಾ ಪರೀಕ್ಷೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಾರಿ ದಸರಾದಲ್ಲಿ 5 ಆನೆಗಳನ್ನ ಮಾತ್ರ ಬಳಸಿಕೊಳ್ಳಲಾಗುತ್ತಿದೆ.. ಕೊರೊನಾ ಅದೆಷ್ಟರಮಟ್ಟಿಗೆ ಈ ಬಾರಿ ದಸರಾ ಹಬ್ಬದ ಮೇಲೆ ಹೊಡೆತ […]

ದಸರಾ ಆನೆಗಳಿಗೂ ಕೊರೊನಾ ಪರೀಕ್ಷೆ: ಈ ಬಾರಿ ಅಂಬಾರಿ ಹೊರುವವರು ಯಾರು?
ಸಾಧು ಶ್ರೀನಾಥ್​
|

Updated on: Sep 12, 2020 | 6:36 AM

Share

ಮೈಸೂರು: ಕೊರೊನಾ ಆತಂಕದ ನಡುವೆಯೇ ಈ ವರ್ಷ ಕಳೆದುಹೋಗಿದೆ. ಈ ಮಧ್ಯೆ ದಸರಾ ಹಬ್ಬಕ್ಕೂ ಕೊರೊನಾ ಸೋಂಕು ಅಡ್ಡಿಯಾಗಿದ್ದು, ಇಷ್ಟೆಲ್ಲಾ ಅಡ್ಡಿ ಆತಂಕಗಳ ನಡುವೆ ಜಂಬೂಸವಾರಿ ನಡೆಸಲು ಸಿದ್ಧತೆ ನಡೆದಿದೆ. ಮೊದಲಿಗೆ ಅಂಬಾರಿ ಹೊರಲು ಆನೆ ಆಯ್ಕೆ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದರು, ಆದರೆ ಸದ್ಯದ ಪರಿಸ್ಥಿತಿಯಲ್ಲಿ ಗಜರಾಯನಿಗೂ ಕೊರೊನಾ ಪರೀಕ್ಷೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಬಾರಿ ದಸರಾದಲ್ಲಿ 5 ಆನೆಗಳನ್ನ ಮಾತ್ರ ಬಳಸಿಕೊಳ್ಳಲಾಗುತ್ತಿದೆ.. ಕೊರೊನಾ ಅದೆಷ್ಟರಮಟ್ಟಿಗೆ ಈ ಬಾರಿ ದಸರಾ ಹಬ್ಬದ ಮೇಲೆ ಹೊಡೆತ ಕೊಟ್ಟಿದೆ ಅಂದ್ರೆ, ಜಂಬೂಸವಾರಿಯಲ್ಲೇ ಕಾಂಪ್ರಮೈಸ್‌ ಮಾಡ್ಕೊಳ್ತಿದ್ದಾರೆ. ಕಾಡಿನಿಂದ 5 ಆನೆಗಳನ್ನ ಮಾತ್ರ ಕರೆದುಕೊಂಡು ಬರಲಾಗುತ್ತಿದೆ. ಅಷ್ಟೇ ಅಲ್ಲ, ಮಾವುತರು ಮಾತ್ರವಲ್ಲದೆ, ಅರಣ್ಯ ಇಲಾಖೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆನೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸೋಕೆ ತಯಾರಿ ಮಾಡ್ಕೊಂಡಿದೆ.

ದಸರಾ ಆನೆಗಳಿಗೂ ಕೊರೊನಾ ಪರೀಕ್ಷೆ.. ಅಷ್ಟಕ್ಕೂ ಅಮೆರಿಕಾದ ಝೂನಲ್ಲಿ ಹುಲಿಗೆ ಕೊರೊನಾ ಕಾಣಿಸಿಕೊಂಡಿದ್ದೇ ಇದಕ್ಕೆ ಕಾರಣ. ಹುಲಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯಿಂದ ಹುಲಿಗೂ ಕೊರೊನಾ ವಕ್ಕರಿಸಿತ್ತು.ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆನೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸಲು ತಜ್ಞರ ಸಲಹೆ ಪಡೆಯಲು ಹಿರಿಯ ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಲ್ಲಿನ ಸಲಹೆಯನ್ನು ಆಧರಿಸಿ ಕಾಡಿನಿಂದ ಹೊರಟಾಗ ಪರೀಕ್ಷೆ ಮಾಡಿಸಬೇಕಾ ಅಥವಾ ಅರಮನೆಗೆ ಬಂದ ನಂತ್ರ ಪರೀಕ್ಷೆ ಮಾಡಿಸಬೇಕಾ‌ ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದಂತೆ.

ಈ ಬಾರಿ ಅರ್ಜುನ ಅಂಬಾರಿ ಹೊರುವುದು ಅನುಮಾನ.. ಈ ಬಾರಿ ಅರ್ಜುನ ಆನೆ ಚಿನ್ನದ ಅಂಬಾರಿ ಹೊರುವುದು ಅನುಮಾನ.ಹೀಗಾಗಿ ಈ ಸ್ಥಾನ ಅಭಿಮನ್ಯು ತುಂಬಲಿದ್ದಾನೆ. ಅರಣ್ಯ ಇಲಾಖೆ ಸರ್ಕಾರಕ್ಕೆ ಕಳುಹಿರುವ ಪಟ್ಟಿಯಲ್ಲೂ ಅಂಬಾರಿ ಹೊರಿಸಲು ಅಭಿಮನ್ಯು ಹೆಸರನ್ನೆ ಸೂಚಿಸಲಾಗಿದೆ. ಅಳೆದು ತೂಗಿ ಅಭಿಮನ್ಯು ಹೆಸರೇ ಫೈನಲ್ ಆಗಿದ್ದು, ಉಳಿದ 5 ಆನೆಗಳ‌ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿ‌ಲಾಗಿದೆ. ಒಟ್ಟಾರೆ ಹೇಳೋದಾದರೆ ಈ ಬಾರಿ ಕೊರೊನಾ ಜನರ ಜೀವನದ ಮೇಲೆ ಮಾತ್ರವಲ್ಲದೆ, ಜಂಬೂಸವಾರಿ ಮೇಲೂ ಪರಿಣಾಮ ಬೀರಿದೆ. ಇಷ್ಟೆಲ್ಲಾ ಒತ್ತಡಗಳ ಮಧ್ಯೆ ಜಂಬೂಸವಾರಿಗೆ ಸಿದ್ಧತೆ ನಡೆದಿರೋದು ಕುತೂಹಲ ಕೆರಳಿಸಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ