AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ರಾಜ್ಯದ ಹಲವು ಕಡೆ ಬೆದರಿಕೆ ಪತ್ರಗಳ ಬಗ್ಗೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಮುಖ್ಯಮಂತ್ರಿಗಳನ್ನ ಭೇಟಿಯಾಗಿ ಸಾಹಿತಿಗಳು ಮಾಹಿತಿ ನೀಡಿದ್ದರು. ಗೃಹ ಸಚಿವರು ಕೂಡ ಸಭೆ ನಡೆಸಿ ತನಿಖೆಗೆ ಸೂಚಿಸಿದ್ದರು. ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಿ ಡಿಜಿ-ಐಜಿಪಿ ಆದೇಶಿಸಿದ್ದರು. ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿಲಾಗಿದೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದರು. ​​

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ
ಸಿಸಿಬಿ
TV9 Web
| Edited By: |

Updated on: Sep 30, 2023 | 2:52 PM

Share

ಬೆಂಗಳೂರು ಸೆ.30: ಸಾಹಿತಿಗಳಿಗೆ (Literature) ಬೆದರಿಕೆ ಪತ್ರ (Threat Letter) ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿಂದತೆ ಸಿಸಿಬಿ ಪೊಲೀಸರು ಕಳೆದ ಒಂದು ತಿಂಗಳಿಂದ ತನಿಖೆಗೆ ಇಳಿದಿದ್ದರು. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹುಡುಕಾಡಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರೂ ಕೂಡ ಯಾವುದೇ ಆರೋಪಿಯ ಪತ್ತೆ ಆಗಿರಲಿಲ್ಲ. ಮೊದಲಿಗೆ ಪತ್ರಗಳು ಬಂದಿದ್ದ ಪೋಸ್ಟ್ ಅಫೀಸ್​ ಪತ್ತೆ ಹಚ್ಚಿದ್ದರು. ನಂತರ ಎಲ್ಲಾ ಪೋಸ್ಟ್ ಅಫೀಸ್​ಗಳ ಟವರ್ ಡಂಪ್ ಮಾಡಿದರು. ನಂತರ ಎಲ್ಲ ನಂಬರ್​​ಗಳ ಪರಿಶೀಲನೆ ಮಾಡಿದ್ದರು.

ಈ ವೇಳೆ ಎಲ್ಲ ಪೋಸ್ಟ್ ಅಫೀಸ್​ಗಳ ಬಳಿ ಅಕ್ಟೀವ್​ ಆಗಿದ್ದ ಕಾಮನ್​​ ನಂಬರ್ ಪತ್ತೆಯಾಗಿತ್ತು. ಇದನ್ನು ಆಧರಿಸಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿ ಬೆದರಿಕೆ ಪತ್ರ ಬರೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿಕೆ

ಕಳೆದ ಎರಡು ವರ್ಷಗಳಿಂದ ರಾಜ್ಯದ ಹಲವು ಕಡೆ ಬೆದರಿಕೆ ಪತ್ರಗಳ ಬಗ್ಗೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಮುಖ್ಯಮಂತ್ರಿಗಳನ್ನ ಭೇಟಿಯಾಗಿ ಸಾಹಿತಿಗಳು ಮಾಹಿತಿ ನೀಡಿದ್ದರು. ಗೃಹ ಸಚಿವರು ಕೂಡ ಸಭೆ ನಡೆಸಿ ತನಿಖೆಗೆ ಸೂಚಿಸಿದ್ದರು. ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಿ ಡಿಜಿ-ಐಜಿಪಿ ಆದೇಶಿಸಿದ್ದರು. ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿಲಾಗಿದೆ. ಆರೋಪಿ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲ ಸಾಹಿತಿಗಳಿಗೂ ಒಂದೇ ರೀತಿಯಲ್ಲಿ ಪತ್ರ ಬರೆದಿದ್ದಾನೆ. ಆರೋಪಿ ವಿರುದ್ಧ ಈ ಹಿಂದೆಯೂ 2 ಕೇಸ್​​ ಇರುವ ಮಾಹಿತಿ ಇದೆ. ಆರೋಪಿ ಎಂಟನೇ ತರಗತಿವರೆಗೂ ವ್ಯಾಸಂಗ ಮಾಡಿದ್ದಾನೆ. ಪ್ರಿಂಟಿಂಗ್​ ಪ್ರೆಸ್​ವೊಂದರಲ್ಲಿ ಆರೋಪಿ ಕೆಲಸ ಮಾಡುತ್ತಿದ್ದನು. ದಾವಣಗೆರೆ ಜಿಲ್ಲೆ ಹಿಂದು ಜಾಗರಣ ವೇದಿಕೆಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿಸಿದರು.

ಯಾವ ಸರ್ಕಾರ ಇದ್ದರೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಾರೆ: ಜಿ.ಪರಮೇಶ್ವರ್

ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ. ಯಾವ ಸರ್ಕಾರ ಇದ್ದರೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಾರೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಪತ್ತೆ: ಸಿಸಿಬಿ ವಿಚಾರಣೆ ವೇಳೆ ಸ್ಪೋಟಕ ಅಂಶ ಬಯಲು

ಶಿವಾಜಿರಾವ್​ಗೆ ಹಿಂದುತ್ವದ ಬಗ್ಗೆ ಒಲವು ಇತ್ತು: ಸಹೋದರ ಗುರುರಾಘವೇಂದ್ರ

ಶಿವಾಜಿರಾವ್ ಬಗ್ಗೆ ಪೊಲೀಸರು ಮಾಹಿತಿ‌ ನೀಡಿದಾಗ ಗೊತ್ತಾಗಿದೆ. ನನ್ನ ಸಹೋದರ ಶಿವಾಜಿರಾವ್​ಗೆ ಹಿಂದುತ್ವದ ಬಗ್ಗೆ ಒಲವು ಇತ್ತು. ಶಿವಮೊಗ್ಗದಲ್ಲಿ ಹಿಂದುತ್ವದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದನು. ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿರುವ ಬಗ್ಗೆ ಕೇಳಿ ಶಾಕ್ ಆಗಿದೆ. ಪ್ರಿಂಟಿಂಗ್​ ಪ್ರೆಸ್​ನಲ್ಲಿ‌ ಕೆಲಸ ಮಾಡುತ್ತಿದ್ದನು. ಇನ್ನೂ ಮದುವೆ ಆಗಿಲ್ಲ. ದಾವಣಗೆರೆ ನಗರದ EWS ಕಾಲೋನಿಯಲ್ಲಿ ಶಿವಾಜಿ ವಾಸವಾಗಿದ್ದನು. ಸೆ.28ರಂದು ಸಿಸಿಬಿ ಪೊಲೀಸರು ಶಿವಾಜಿ ರಾವ್​ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ಶಿವಾಜಿ ಸಹೋದರ ಗುರುರಾಘವೇಂದ್ರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು