AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್ ಮಾಡಿ ಕೋಟಿಗೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಖದೀಮರು ಅರೆಸ್ಟ್.. ಐವರಿಗಾಗಿ ಮುಂದುವರೆದ ಶೋಧ

ಗ್ರಾನೈಟ್ ಕಮಿಷನ್ ವ್ಯವಹಾರ ಮಾಡುತ್ತಿದ್ದ ಜಬೀಖಾನ್ ಖಾನ್​ನನ್ನು ಸಿನಿಮಾ ಸ್ಟೈಲ್​ನಲ್ಲಿ‌ ಕಿಡ್ನಾಪ್ ಮಾಡಿ ಆರೋಪಿಗಳು 1ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಬೆದರಿಕೆ ಕರೆಗೆ ಅಂಜಿದ ಪತ್ನಿ, ತನ್ನ ಗಂಡನ ಪ್ರಾಣ ಉಳಿಸಲು ಚಿನ್ನಾಭರಣ ಗಿರವಿ ಇಟ್ಟು 6.50 ಲಕ್ಷ ಹಣವನ್ನು ಕಿಡ್ನಾಪರ್ಸ್​ ಗೆ ನೀಡಿದ್ದರು.

ಕಿಡ್ನಾಪ್ ಮಾಡಿ ಕೋಟಿಗೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಖದೀಮರು ಅರೆಸ್ಟ್.. ಐವರಿಗಾಗಿ ಮುಂದುವರೆದ ಶೋಧ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 19, 2021 | 8:39 AM

Share

ಮೈಸೂರು: ಹಣಕ್ಕಾಗಿ ವ್ಯಕ್ತಿಯ ಅಪಹರಣ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ನಂಜನಗೂಡು ಗ್ರಾಮಾಂತರ ಪೊಲೀಸರಿಂದ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಜಾವೀದ್ ಖಾನ್, ಮೊಹಮ್ಮದ್ ನಜೀಬ್, ಶಾಕೀರುದ್ದೀನ್ ಬಂಧಿತರು. ಚಾಮರಾಜನಗರದ ಜಬೀಖಾನ್ ಅಪಹರಿಸಿ ₹1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಸದ್ಯ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಘಟನೆ ಗ್ರಾನೈಟ್ ಕಮಿಷನ್ ವ್ಯವಹಾರ ಮಾಡುತ್ತಿದ್ದ ಜಬೀಖಾನ್ ಖಾನ್​ನನ್ನು ಸಿನಿಮಾ ಸ್ಟೈಲ್​ನಲ್ಲಿ‌ ಕಿಡ್ನಾಪ್ ಮಾಡಿ ಆರೋಪಿಗಳು 1ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಬೆದರಿಕೆ ಕರೆಗೆ ಅಂಜಿದ ಪತ್ನಿ, ತನ್ನ ಗಂಡನ ಪ್ರಾಣ ಉಳಿಸಲು ಚಿನ್ನಾಭರಣ ಗಿರವಿ ಇಟ್ಟು 6.50 ಲಕ್ಷ ಹಣವನ್ನು ಕಿಡ್ನಾಪರ್ಸ್​ ಗೆ ನೀಡಿದ್ದರು. ಬಳಿಕ ಮನೆಯಿಂದ ಹೊರಬಾರದಂತೆ, ಪೊಲೀಸರಿಗೆ ದೂರು ನೀಡದಂತೆ ಕಿಡ್ನಾಪರ್ಸ್ ಬೆದರಿಕೆ ಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಪೊಲೀಸರು ಸೂಕ್ಷ್ಮ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎ1 ಆರೋಪಿ ಜಾವೀದ್ ಖಾನ್ ಅಪಹರಣದ ರೂವಾರಿ. ಈತ ಮಂಡ್ಯ, ಮೈಸೂರು, ಹಾಸನ, ಬೆಂಗಳೂರಿನ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈ ಕಿಡ್ನಾಪ್ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು ಒಂದು ಕಾರು, ರಿವಾಲ್ವರ್, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಐವರು ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್; ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸೇರಿ ಮೂವರು ಅರೆಸ್ಟ್

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ