AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್ ಮಾಡಿ ಕೋಟಿಗೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಖದೀಮರು ಅರೆಸ್ಟ್.. ಐವರಿಗಾಗಿ ಮುಂದುವರೆದ ಶೋಧ

ಗ್ರಾನೈಟ್ ಕಮಿಷನ್ ವ್ಯವಹಾರ ಮಾಡುತ್ತಿದ್ದ ಜಬೀಖಾನ್ ಖಾನ್​ನನ್ನು ಸಿನಿಮಾ ಸ್ಟೈಲ್​ನಲ್ಲಿ‌ ಕಿಡ್ನಾಪ್ ಮಾಡಿ ಆರೋಪಿಗಳು 1ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಬೆದರಿಕೆ ಕರೆಗೆ ಅಂಜಿದ ಪತ್ನಿ, ತನ್ನ ಗಂಡನ ಪ್ರಾಣ ಉಳಿಸಲು ಚಿನ್ನಾಭರಣ ಗಿರವಿ ಇಟ್ಟು 6.50 ಲಕ್ಷ ಹಣವನ್ನು ಕಿಡ್ನಾಪರ್ಸ್​ ಗೆ ನೀಡಿದ್ದರು.

ಕಿಡ್ನಾಪ್ ಮಾಡಿ ಕೋಟಿಗೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಖದೀಮರು ಅರೆಸ್ಟ್.. ಐವರಿಗಾಗಿ ಮುಂದುವರೆದ ಶೋಧ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Mar 19, 2021 | 8:39 AM

Share

ಮೈಸೂರು: ಹಣಕ್ಕಾಗಿ ವ್ಯಕ್ತಿಯ ಅಪಹರಣ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ನಂಜನಗೂಡು ಗ್ರಾಮಾಂತರ ಪೊಲೀಸರಿಂದ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಜಾವೀದ್ ಖಾನ್, ಮೊಹಮ್ಮದ್ ನಜೀಬ್, ಶಾಕೀರುದ್ದೀನ್ ಬಂಧಿತರು. ಚಾಮರಾಜನಗರದ ಜಬೀಖಾನ್ ಅಪಹರಿಸಿ ₹1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಸದ್ಯ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಘಟನೆ ಗ್ರಾನೈಟ್ ಕಮಿಷನ್ ವ್ಯವಹಾರ ಮಾಡುತ್ತಿದ್ದ ಜಬೀಖಾನ್ ಖಾನ್​ನನ್ನು ಸಿನಿಮಾ ಸ್ಟೈಲ್​ನಲ್ಲಿ‌ ಕಿಡ್ನಾಪ್ ಮಾಡಿ ಆರೋಪಿಗಳು 1ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಬೆದರಿಕೆ ಕರೆಗೆ ಅಂಜಿದ ಪತ್ನಿ, ತನ್ನ ಗಂಡನ ಪ್ರಾಣ ಉಳಿಸಲು ಚಿನ್ನಾಭರಣ ಗಿರವಿ ಇಟ್ಟು 6.50 ಲಕ್ಷ ಹಣವನ್ನು ಕಿಡ್ನಾಪರ್ಸ್​ ಗೆ ನೀಡಿದ್ದರು. ಬಳಿಕ ಮನೆಯಿಂದ ಹೊರಬಾರದಂತೆ, ಪೊಲೀಸರಿಗೆ ದೂರು ನೀಡದಂತೆ ಕಿಡ್ನಾಪರ್ಸ್ ಬೆದರಿಕೆ ಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಪೊಲೀಸರು ಸೂಕ್ಷ್ಮ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎ1 ಆರೋಪಿ ಜಾವೀದ್ ಖಾನ್ ಅಪಹರಣದ ರೂವಾರಿ. ಈತ ಮಂಡ್ಯ, ಮೈಸೂರು, ಹಾಸನ, ಬೆಂಗಳೂರಿನ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈ ಕಿಡ್ನಾಪ್ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು ಒಂದು ಕಾರು, ರಿವಾಲ್ವರ್, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಐವರು ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್; ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸೇರಿ ಮೂವರು ಅರೆಸ್ಟ್

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ