AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಇಲಾಖೆ ಎಡವಟ್ಟು: ಕುರಿ ಮೇಯಿಸಲು ಹೋದವರು ಪಕ್ಕದ ಕಾಲುವೆಯಲ್ಲಿ ಮುಳುಗಿ ಸತ್ತೇ ಹೋದ್ರು..

ಕೋಲಾರ: ಬಾಳಿ ಬದುಕಬೇಕಿದ್ದ ಮೂವರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋದವರು ಬಾರದ ಲೋಕಕ್ಕೆ ಹೋಗಿದ್ದರಿಂದ ಹೆತ್ತವರು ದಿಕ್ಕೇ ತೋಚದಂತಾಗಿದ್ದಾರೆ. ರೈಲ್ವೆ ಇಲಾಖೆಯವರು ಮಾಡಿರೋ ಅವೈಜ್ಞಾನಿಕ ಕಾಲುವೆ ಇದಕ್ಕೆಲ್ಲ ಕಾರಣವಾಗಿದೆ. ಮೊನ್ನೆ ಕೋಲಾರ ಜಿಲ್ಲೆ ಬಂಗಾರಪೇಟೆ ಸುತ್ತಮುತ್ತ ಭರ್ಜರಿ ಮಳೆ ಸುರಿದಿತ್ತು. ಪರಿಣಾಮ ಕುಂಬಾರಪಾಳ್ಯದ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ತುಂಬಿತ್ತು. ಈ ವೇಳೆ ತಮ್ಮ ಮನೆಯಲ್ಲಿದ್ದ ಕುರಿಗಳನ್ನ ಮೇಯಿಸುತ್ತಾ ಅಲ್ಲೇ ಆಟವಾಡಿಕೊಂಡಿದ್ದ ಮಕ್ಕಳು ನೀರಿಗೆ ಇಳಿದಿದ್ದಾರೆ. ನೀರಿನ ಆಳ ತಿಳಿಯದೆ ಇಳಿದ ಮೂರು ಜನ ಮಕ್ಕಳು […]

ರೈಲ್ವೆ ಇಲಾಖೆ ಎಡವಟ್ಟು: ಕುರಿ ಮೇಯಿಸಲು ಹೋದವರು ಪಕ್ಕದ ಕಾಲುವೆಯಲ್ಲಿ ಮುಳುಗಿ ಸತ್ತೇ ಹೋದ್ರು..
ಆಯೇಷಾ ಬಾನು
|

Updated on:Oct 11, 2020 | 8:27 AM

Share

ಕೋಲಾರ: ಬಾಳಿ ಬದುಕಬೇಕಿದ್ದ ಮೂವರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋದವರು ಬಾರದ ಲೋಕಕ್ಕೆ ಹೋಗಿದ್ದರಿಂದ ಹೆತ್ತವರು ದಿಕ್ಕೇ ತೋಚದಂತಾಗಿದ್ದಾರೆ. ರೈಲ್ವೆ ಇಲಾಖೆಯವರು ಮಾಡಿರೋ ಅವೈಜ್ಞಾನಿಕ ಕಾಲುವೆ ಇದಕ್ಕೆಲ್ಲ ಕಾರಣವಾಗಿದೆ.

ಮೊನ್ನೆ ಕೋಲಾರ ಜಿಲ್ಲೆ ಬಂಗಾರಪೇಟೆ ಸುತ್ತಮುತ್ತ ಭರ್ಜರಿ ಮಳೆ ಸುರಿದಿತ್ತು. ಪರಿಣಾಮ ಕುಂಬಾರಪಾಳ್ಯದ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ತುಂಬಿತ್ತು. ಈ ವೇಳೆ ತಮ್ಮ ಮನೆಯಲ್ಲಿದ್ದ ಕುರಿಗಳನ್ನ ಮೇಯಿಸುತ್ತಾ ಅಲ್ಲೇ ಆಟವಾಡಿಕೊಂಡಿದ್ದ ಮಕ್ಕಳು ನೀರಿಗೆ ಇಳಿದಿದ್ದಾರೆ. ನೀರಿನ ಆಳ ತಿಳಿಯದೆ ಇಳಿದ ಮೂರು ಜನ ಮಕ್ಕಳು ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಎಷ್ಟು ಹೊತ್ತಾದ್ರು ಮನೆಗೆ ಬಾರದ ಮಕ್ಕಳನ್ನು ಹುಡುಕಾಡಿದಾಗ, ತಂದೆ ಅಮ್ಜದ್​ಗೆ ಮಕ್ಕಳ ಶವ ಸಿಕ್ಕಿದೆ. ಮೃತರನ್ನ 8 ವರ್ಷದ ಬಾಲಕಿ ರುಕ್ಸರ್, 10 ವರ್ಷದ ಸಾಧಿಕ್ ಹಾಗೂ 7 ವರ್ಷದ ಫಯಾಜ್ ಅಂತಾ ಗುರುತಿಸಲಾಗಿದೆ.

ಈ ಮೂರು ಮಕ್ಕಳ ಸಾವಿಗೆ ರೈಲ್ವೆ ಇಲಾಖೆ ಕಾರಣ ಅಂತಾ ಸ್ಥಳೀಯರು ಆರೋಪಿಸಿದ್ದಾರೆ. ಅವೈಜ್ಞಾನಿಕ ರೈಲ್ವೆ ಅಂಡರ್​ಪಾಸ್ ಕಾಮಗಾರಿ ಮಕ್ಕಳ ಸಾವಿಗೆ ಕಾರಣ ಅಂತಿದ್ದಾರೆ. ಅಂಡರ್​ಪಾಸ್​ನಲ್ಲಿ ಪ್ರತಿಬಾರಿ ಮಳೆ ಬಂದಾಗ ನೀರು ತುಂಬಿಕೊಂಡು ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಅಂಡರ್​ ಪಾಸ್​ ಪಕ್ಕದಲ್ಲಿ ಕಾಲುವೆ ಮಾಡಿ ನೀರನ್ನು ಬಿಡಲಾಗಿತ್ತು. ಇದೇ ಮಕ್ಕಳ ಸಾವಿಗೆ ಕಾರಣ ಅಂತಾ ಸ್ಥಳೀಯರು ಆರೋಪಿಸಿದ್ದಾರೆ. ಅಲ್ದೆ, ಮಕ್ಕಳ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಅಂತಾ ಆಗ್ರಹಿಸಿದ್ದಾರೆ.

ಒಟ್ಟಾರೆ ಬಾಳಿ ಬದುಕಬೇಕಿದ್ದ ಮೂರು ಮಕ್ಕಳನ್ನು ಬಲಿ ಪಡೆದಿರು ಇದೇ ರೀತಿಯ ಅವೈಜ್ಞಾನಿಕ ರೈಲ್ವೆ ಅಂಡರ್​ಪಾಸ್​ಗಳು ಜಿಲ್ಲೆಯಲ್ಲಿ ಹತ್ತಾರಿವೆ. ಇಂತ ಅಮಾಯಕ ಜೀವಗಳನ್ನು ಬಲಿ ಪಡೆಯುವ ಮೊದಲು ಸಂಬಂಧ ಪಟ್ಟವರು ಅವೈಜ್ಞಾನಿಕ ಅಂಡರ್​ಪಾಸ್​ಗಳನ್ನ ಸರಿ ಪಡಿಸಬೇಕಿದೆ.

Published On - 8:27 am, Sun, 11 October 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?