AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಆವರಣದಲ್ಲಿ ತೋಡಿದ್ದ ಗುಂಡಿಗೆ ಬಿದ್ದು 3 ಬಾಲಕರ ಸಾವು

ಹಾವೇರಿ: ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈಗ ಆ ಗುಂಡಿಗಳೇ ಆ ಬಾಲಕರ ಪಾಲಿಗೆ ಮೃತ್ಯುಕೂಪವಾಗಿದ್ದು, ಮೂರು ಜೀವವನ್ನ ಪಡೆದಿವೆ. ಶಾಲಾ ಆವರಣದಲ್ಲಿರುವ ಗುಂಡಿಗಳಲ್ಲಿ ತುಂಬಿರೋ ನೀರು. ನೀರಿನಿಂದ ಬಾಲಕರ‌ ಮೃತದೇಹ ಹೊರತೆಗಿತಿರೋ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು. ಗುಂಡಿಯಲ್ಲಿನ ನೀರು ಹೊರಹಾಕ್ತಿರೋ ಪುರಸಭೆ ಸಿಬ್ಬಂದಿ. ಗುಂಡಿಯಲ್ಲಿ ಬಿದ್ದು ಮೂವರು […]

ಶಾಲಾ ಆವರಣದಲ್ಲಿ ತೋಡಿದ್ದ ಗುಂಡಿಗೆ ಬಿದ್ದು 3 ಬಾಲಕರ ಸಾವು
ಆಯೇಷಾ ಬಾನು
|

Updated on: Oct 25, 2020 | 7:43 AM

Share

ಹಾವೇರಿ: ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈಗ ಆ ಗುಂಡಿಗಳೇ ಆ ಬಾಲಕರ ಪಾಲಿಗೆ ಮೃತ್ಯುಕೂಪವಾಗಿದ್ದು, ಮೂರು ಜೀವವನ್ನ ಪಡೆದಿವೆ.

ಶಾಲಾ ಆವರಣದಲ್ಲಿರುವ ಗುಂಡಿಗಳಲ್ಲಿ ತುಂಬಿರೋ ನೀರು. ನೀರಿನಿಂದ ಬಾಲಕರ‌ ಮೃತದೇಹ ಹೊರತೆಗಿತಿರೋ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು. ಗುಂಡಿಯಲ್ಲಿನ ನೀರು ಹೊರಹಾಕ್ತಿರೋ ಪುರಸಭೆ ಸಿಬ್ಬಂದಿ.

ಗುಂಡಿಯಲ್ಲಿ ಬಿದ್ದು ಮೂವರು ಬಾಲಕರು ಸಾವು! ಹಾವೇರಿ‌ ಜಿಲ್ಲೆ ಬ್ಯಾಡಗಿ ಪಟ್ಟಣದ ಸರ್ಕಾರಿ ಹಿರಿಯ ಉರ್ದು ಹೆಣ್ಣು ಮಕ್ಕಳ ಶಾಲೆ ಆವರಣದಲ್ಲಿ ನಡೆಯ ಬಾರದ ಘಟನೆ ನಡೆದು ಹೋಗಿದೆ. ಈ ಶಾಲೆಯಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇರೋದಕ್ಕೆ ಹೊಸದಾಗಿ ಮತ್ತೆರಡು ಕೊಠಡಿಗಳು ಮಂಜೂರಾಗಿದ್ದವು. ಕೊಠಡಿಗಳ ನಿರ್ಮಾಣಕ್ಕೆ ಗುಂಡಿ ತೆಗೆಯಲಾಗಿತ್ತು.

ಆದ್ರೂ ಶಾಲೆ ಸುತ್ತಮುತ್ತಲಿನ ಬಾಲಕರು ಶಾಲಾ ಮೈದಾನದಲ್ಲಿ ನಿತ್ಯವೂ ಆಟ ಆಡುತ್ತಿದ್ರು. ಕಳೆದೆರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಕೊಠಡಿ ನಿರ್ಮಾಣಕ್ಕೆ ತೋಡಿದ್ದ ಗುಂಡಿಗಳಲ್ಲಿ ಮಳೆಯ ನೀರು ತುಂಬಿಕೊಂಡಿತ್ತು. ಇಲ್ಲಿ ಆಟ ಆಡೋಕೆ ಅಂತ ಆರು ಜನ ಬಾಲಕರು ಹೋಗಿದ್ದಾರೆ. ಹೀಗೆ ಆಟ ಆಡುತ್ತಾ ಆಡುತ್ತಾ ಬಾಲಕರು ಗುಂಡಿಯೊಳೆಗೆ ಬಿದ್ದಿದ್ದು, ಮೂವರು ಬಾಲಕರು ಗುಂಡಿಯಲ್ಲಿನ ನೀರಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

ಮೂವರು ಬಾಲಕರು ನೀರಲ್ಲಿ ಮುಳುಗಿರೋ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ನೀರಿಗೆ ಇಳಿದಿದ್ದಾರೆ. ಅಷ್ಟರಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ರು. ಮತ್ತೊಬ್ಬನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಆತ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮೃತಪಟ್ಟಿದ್ದಾನೆ. ಮೃತ ಬಾಲಕರನ್ನ ಜಾಫರ್, ಅಜ್ಮಲ್, ಅಕ್ಮಲ್ ಅಂತ ಗುರುತಿಸಲಾಗಿದೆ. ಮೂವರು ಬಾಲಕರು ನೀರಲ್ಲಿ‌ ಮುಳುಗಿರೋ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಪುರಸಭೆ ಅಧಿಕಾರಿಗಳು ಮೃತದೇಹಗಳನ್ನ ಹೊರತೆಗೆಯೋ ಕಾರ್ಯಾಚರಣೆ ನಡೆಸಿದ್ರು.

ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಬಾಲಕರನ್ನ ಕಳೆದು ಕೊಂಡ ಕುಟಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಮೃತ ಬಾಲಕರ‌ ಕುಟುಂಬಕ್ಕೆ ತಲಾ ಐದು ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಒಟ್ನಲ್ಲಿ ಆಟ ಆಡುತ್ತಿದ್ದ ಮೂವರು ಮಕ್ಕಳು ನೀರಿದ್ದ ಗುಂಡಿಗೆ ಬಿದ್ದು ಮೃತಪಟ್ಟಿದ್ದು ಮಾತ್ರ ದುರಂತ.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ