ಖಾಸಗಿ ಬಸ್-ಬೈಕ್ ಮುಖಾಮುಖಿ: ದಂಪತಿ, ಪುತ್ರ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಹಾಗೂ ಮಗ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಗ್ರಾಮದ ಬಳಿ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಪ್ಪ, ಪತ್ನಿ ಆಶಾ, ಪುತ್ರ ಹೇಮಂತ್‌ ಮೃತ ದುರ್ದೈವಿಗಳು. ಶಿವಮೊಗ್ಗದಿಂದ ಹನುಮಂತಾಪುರಕ್ಕೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಮೂಡಲವಿಠಲಾಪುರ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್​ಗೆ ಬಸ್ ಡಿಕ್ಕಿಯೊಡೆದಿದೆ. ಬೈಕ್​ನಲ್ಲಿದ್ದ ದಂಪತಿ ಮತ್ತು 12 ವರ್ಷದ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ […]

ಖಾಸಗಿ ಬಸ್-ಬೈಕ್ ಮುಖಾಮುಖಿ: ದಂಪತಿ, ಪುತ್ರ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​

Updated on: Feb 16, 2020 | 7:46 PM

ಶಿವಮೊಗ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಹಾಗೂ ಮಗ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಗ್ರಾಮದ ಬಳಿ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಪ್ಪ, ಪತ್ನಿ ಆಶಾ, ಪುತ್ರ ಹೇಮಂತ್‌ ಮೃತ ದುರ್ದೈವಿಗಳು.

ಶಿವಮೊಗ್ಗದಿಂದ ಹನುಮಂತಾಪುರಕ್ಕೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಮೂಡಲವಿಠಲಾಪುರ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್​ಗೆ ಬಸ್ ಡಿಕ್ಕಿಯೊಡೆದಿದೆ. ಬೈಕ್​ನಲ್ಲಿದ್ದ ದಂಪತಿ ಮತ್ತು 12 ವರ್ಷದ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಮೃತರು ಹನುಮಂತಾಪುರ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us