AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ ನೈಜೀರಿಯಾ ಪ್ರಜೆಗಳು ಅಂದರ್..

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರೈಕ್ ಅಂಥೋನಿ ಅಕುಚುಕುವ, ಎಜೋಫೋಮ ಎಲೋಚುಕುವ, ಒಗ್ ಒಗ್ ಚುಕುವ ಫ್ರಾನ್ಸಿಸ್ ಬಂಧಿತ ಆರೋಪಿಗಳು. ಐಟಿ ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಸದಾನದಂದ ನಗರದ ಪಾರ್ಕ್ ಬಳಿ ಸಾರ್ವಜನಿಕವಾಗಿ ಡ್ರಗ್ಸ್ ಸಪ್ಲೈ ಮಾಡಲು ಯತ್ನಿಸುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆಫ್ರಿಕನ್ ಮೂಲದ ಮೂವರು ನೈಜೀರಿಯಾ ಪ್ರಜೆಗಳನ್ನು ಅರೆಸ್ಟ್ […]

ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ ನೈಜೀರಿಯಾ ಪ್ರಜೆಗಳು ಅಂದರ್..
ಆಯೇಷಾ ಬಾನು
|

Updated on: Oct 04, 2020 | 10:10 AM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರೈಕ್ ಅಂಥೋನಿ ಅಕುಚುಕುವ, ಎಜೋಫೋಮ ಎಲೋಚುಕುವ, ಒಗ್ ಒಗ್ ಚುಕುವ ಫ್ರಾನ್ಸಿಸ್ ಬಂಧಿತ ಆರೋಪಿಗಳು.

ಐಟಿ ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಸದಾನದಂದ ನಗರದ ಪಾರ್ಕ್ ಬಳಿ ಸಾರ್ವಜನಿಕವಾಗಿ ಡ್ರಗ್ಸ್ ಸಪ್ಲೈ ಮಾಡಲು ಯತ್ನಿಸುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆಫ್ರಿಕನ್ ಮೂಲದ ಮೂವರು ನೈಜೀರಿಯಾ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ.

ಪ್ರಕರಣದ ಮತ್ತೋರ್ವ ಆರೋಪಿ‌ ಮೈನ್ ಡ್ರಗ್ ಪೇಡ್ಲರ್ ಜೋ ವಿರುದ್ಧ ಸಹ ದೂರು ದಾಖಲಾಗಿದೆ. ಪ್ರಕರಣದ ಆರೋಪಿ ಜೋ ನೈಜೀರಿಯಾದ ತಿರುಪುರ್​ನಿಂದ ಡ್ರಗ್ ಸಪ್ಲೈ ಮಾಡ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಂಧಿತ ಆರೋಪಿಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ123 ಗ್ರಾಂ ಕೊಕೇನ್, 15 ಎಕ್ಸ್ಟಾಸಿ ಟ್ಯಾಬ್ಲೆಟ್, ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನಗಳು ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು ವಿದ್ಯಾರ್ಥಿ ಹಾಗೂ ವ್ಯಾಪಾರದ ವೀಸಾ ಪಾಸ್‌ಪೋರ್ಟ್ ಅಡಿ ಭಾರತಕ್ಕೆ ಬಂದಿರುವ ಮಾಹಿತಿ ಇದೆ. ಅಲ್ಲದೆ ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ದರು ಅಕ್ರಮವಾಗಿ ಭಾರತದಲ್ಲೇ ನೆಲೆಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದಿರುವ ಪೊಲೀಸರಿಂದ ವಿಚಾರಣೆ ಮುಂದುವರೆದಿದೆ.

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ