AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ