AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?