AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ