
ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಶಾಲಾ ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ದರ್ಶನ್(13), ಶ್ರೀನಿವಾಸ್(13) ಹಾಗೂ ನಂದನ್(12) ಮೃತ ದುರ್ದೈವಿಗಳು.
ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
Published On - 2:30 pm, Wed, 12 February 20