AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಬಿದ್ದು ಸಾವು

ಮಂಡ್ಯ: ಬೈಕ್​ನಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ. ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ಹಾಗೂ ಈ ದಂಪತಿ ಮಗು‌ ಸೇರಿ ಮೂವರು ಬೈಕ್​ ಮೇಲೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಹಂಪ್ಸ್ ಮೇಲೆ ಬೈಕ್​ ಹತ್ತಿದೆ. ಈ ವೇಳೆ ತಾಯಿ ರಂಜಿತಾ ಜೊತೆ ಕುಳಿತಿದ್ದ ಮಗು ರಂಜಿತಾ ಕೈತಪ್ಪಿ ಕೆಳಗೆ ಬಿದ್ದಿದೆ. ಹೀಗಾಗಿ ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಬಿದ್ದು ಸಾವು
ಪೃಥ್ವಿಶಂಕರ
| Edited By: |

Updated on:Nov 23, 2020 | 2:36 PM

Share

ಮಂಡ್ಯ: ಬೈಕ್​ನಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ.

ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ಹಾಗೂ ಈ ದಂಪತಿ ಮಗು‌ ಸೇರಿ ಮೂವರು ಬೈಕ್​ ಮೇಲೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಹಂಪ್ಸ್ ಮೇಲೆ ಬೈಕ್​ ಹತ್ತಿದೆ. ಈ ವೇಳೆ ತಾಯಿ ರಂಜಿತಾ ಜೊತೆ ಕುಳಿತಿದ್ದ ಮಗು ರಂಜಿತಾ ಕೈತಪ್ಪಿ ಕೆಳಗೆ ಬಿದ್ದಿದೆ. ಹೀಗಾಗಿ ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ.

ಮಂಗಳೂರಿನಲ್ಲಿಯೂ ಮಗುವೊಂದು ಹೀಗೆಯೇ ಮೃತಪಟ್ಟಿತ್ತು ಶಿವಕುಮಾರ್ ಮತ್ತು ರಂಜಿತಾ ದಂಪತಿ ಮದುವೆ ಕಾರ್ಯಕ್ರಮಕ್ಕೆ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಮ್ಮ ಪ್ರಪಂಚವೇ ಆಗಿದ್ದ ಮಗು ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಂಗಳೂರಿನಲ್ಲಿಯೂ ಕಳೆದ ವರ್ಷ ಇಂತಹುದೇ ಘಟನೆ ನಡೆದಿತ್ತು.

Published On - 1:03 pm, Fri, 20 November 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು