AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ!

ಬೆಂಗಳೂರು: ಹೊಸ ವರ್ಷವನ್ನು ವಿವಿಧ ರೀತಿಯಲ್ಲಿ ವೆಲ್​ಕಂ ಮಾಡೋಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಅದ್ರಲ್ಲೂ ರಾಜಧಾನಿ ಜನರು ನ್ಯೂ ಇಯರ್​ಗಾಗಿ ಹಲವಾರು ಕಾರ್ಯಕ್ರಮಗಳನ್ನ ಪ್ಲ್ಯಾನ್ ಮಾಡ್ಕೊಂಡಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಜನರಿಗೆ ಭದ್ರತೆ ಕೊಡುವ ಕುರಿತು ಸಿದ್ಧತೆಗಳನ್ನ ನಡೆಸುತ್ತಿದ್ದಾರೆ. ನಿಮಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ! ಹೊಸ ವರ್ಷದ ಹಿಂದಿನ ರಾತ್ರಿ ನಗರದ 8 ವಿಭಾಗಗಳಲ್ಲೂ ಪೊಲೀಸರು ಭದ್ರತೆ ನೀಡಲಿದ್ದಾರೆ. ರಾತ್ರಿ 10 ಗಂಟೆ ಬಳಿಕ ಬೆಂಗಳೂರಿನ ಎಲ್ಲ ಫ್ಲೈ ಓವರ್​ಗಳನ್ನು […]

ನಿಮ್ಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ!
ಸಾಧು ಶ್ರೀನಾಥ್​
|

Updated on:Dec 28, 2019 | 12:06 PM

Share

ಬೆಂಗಳೂರು: ಹೊಸ ವರ್ಷವನ್ನು ವಿವಿಧ ರೀತಿಯಲ್ಲಿ ವೆಲ್​ಕಂ ಮಾಡೋಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಅದ್ರಲ್ಲೂ ರಾಜಧಾನಿ ಜನರು ನ್ಯೂ ಇಯರ್​ಗಾಗಿ ಹಲವಾರು ಕಾರ್ಯಕ್ರಮಗಳನ್ನ ಪ್ಲ್ಯಾನ್ ಮಾಡ್ಕೊಂಡಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಜನರಿಗೆ ಭದ್ರತೆ ಕೊಡುವ ಕುರಿತು ಸಿದ್ಧತೆಗಳನ್ನ ನಡೆಸುತ್ತಿದ್ದಾರೆ.

ನಿಮಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ! ಹೊಸ ವರ್ಷದ ಹಿಂದಿನ ರಾತ್ರಿ ನಗರದ 8 ವಿಭಾಗಗಳಲ್ಲೂ ಪೊಲೀಸರು ಭದ್ರತೆ ನೀಡಲಿದ್ದಾರೆ. ರಾತ್ರಿ 10 ಗಂಟೆ ಬಳಿಕ ಬೆಂಗಳೂರಿನ ಎಲ್ಲ ಫ್ಲೈ ಓವರ್​ಗಳನ್ನು ಟ್ರಾಫಿಕ್ ಪೊಲೀಸರು ಬಂದ್ ಮಾಡಲಿದ್ದಾರೆ. ಮುಖ್ಯವಾಗಿ ಜನಸಂದಣಿ ಇರುವ ಬ್ರಿಗೇಡ್ ರೋಡ್ ಮತ್ತು ಎಂಜಿ ರೋಡ್​, ಕೋರಮಂಗಲ ಮತ್ತು ಇಂದಿರಾನಗರದಲ್ಲಿಯೂ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಅಂದು ಪೊಲೀಸರು ಎರಡು ಶಿಫ್ಟ್​ನಲ್ಲಿ ಕೆಲಸ ಮಾಡಲಿದ್ದಾರೆ. ಸಿಸಿಕ್ಯಾಮರಾ, ಬೈನಾಕುಲರ್, ವಾಕಿ ಟಾಕಿ ಮತ್ತು ಡ್ರೋನ್ ಮೂಲಕ ಕಣ್ಗಾವಲು ಇಡಲಿದ್ದಾರೆ. ಈಗಾಗಲೇ ವಿವಿಧೆಡೆ ಒಟ್ಟು 1500ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಂಗಳೂರಿನ ಗಲಭೆ ವೇಳೆ ಕ್ಯಾಮರಾಗಳನ್ನು ಹಾನಿ ಮಾಡಲಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಹೆಚ್ಚು ಹಿಡನ್ ಕ್ಯಾಮರಾ ಪೊಲೀಸರು ಬಳಕೆ ಮಾಡಲಿದ್ದಾರೆ.

ಮಾದಕ ವಸ್ತು ಪತ್ತೆಗೆ ವಿಶೇಷ ತಂಡ: ಗಾಂಜಾ ಮತ್ತು ಮಾದಕ ವಸ್ತುಗಳನ್ನು ಪತ್ತೆಮಾಡಲು ವಿಷೇಶ ತಂಡ ರಚಿಸಲಾಗಿದೆ. ಸ್ಟಾರ್ ಹೋಟೆಲ್​ಗಳಿಗೆ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಯಲಿದೆ. ಭದ್ರತೆಗೆ ಖಾಸಗಿ ಸೆಕ್ಯುರಿಟಿಗಳನ್ನು ಸಹ ಪೊಲೀಸರು ಬಳಸಲಿದ್ದಾರೆ. ಆಯ್ದ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಳನ್ನೂ ಮಾಡಲಾಗುವುದು. ಅದನ್ನು ಸೇಫ್ ಐಲೆಂಡ್ ಎಂದು ಕರೆಯಲಾಗುತ್ತದೆ.

ಮಹಿಳೆಯರ ಭದ್ರತೆಗೆ ವಿಶೇಷ ಕಾಳಜಿ: ಮಹಿಳೆಯರ ಭದ್ರತೆಗೆ ವಿಶೇಷ ಕಾಳಜಿ ವಹಿಸಲಾಗುವುದು. ಈಗಾಗಲೇ ಓಲಾ ಮತ್ತು ಊಬರ್ ಜೊತೆ ಪೊಲೀಸರ ಮಾತುಕತೆ ನಡೆದಿದೆ. ಮಹಿಳೆಯರ ಭದ್ರತೆ ಕುರಿತು ಸೂಚಿಸಲಾಗಿದೆ. ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ಸೇವೆ ತಡರಾತ್ರಿ 2 ಗಂಟೆವರೆಗೆ ಇರಲಿದೆ. ರ್ಯಾಶ್ ಡ್ರೈವಿಂಗ್ ಹಾಗು ವೀಲಿಂಗ್​ಗೆ ಅವಕಾಶವಿಲ್ಲ.

ನಂಬಿಕಸ್ಥರ ಜೊತೆ ಮಾತ್ರ ಹೆಣ್ಣುಮಕ್ಕಳು ಹೊರಗೆ ಬನ್ನಿ. ಅಪರಿಚಿತರು ನೀಡಿದ್ದನ್ನು ಯಾವುದೇ ಕಾರಣಕ್ಕೂ ಪಡೆಯಬೇಡಿ. ಯಾರಾದ್ರು ಡ್ರಗ್ಸ್ ಆಫರ್ ಮಾಡಿದ್ರೆ ಪಡೆಯಲೇಬಾರದು. ಪ್ರಯಾಣಿಕರನ್ನು ಆಟೋ ರಿಕ್ಷಾಗಳು ಮತ್ತು ಕ್ಯಾಬ್​ಗಳು ಸತಾಯಿಸುವಂತಿಲ್ಲ. ಹೆಚ್ಚಿನ ಹಣ ಕೇಳುವಂತಿಲ್ಲ. ಒಂದು ವೇಳೆ ಏನಾದ್ರು ಆದ್ರೆ ಕಂಟ್ರೋಲ್ ರೂಮ್​ಗೆ ಕರೆ ಮಾಡಲು ಭಾಸ್ಕರ್ ರಾವ್​ ಸೂಚಿಸಿದ್ದಾರೆ.

Published On - 11:52 am, Sat, 28 December 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ