AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​

ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಆಯೇಷಾ ಬಾನು
| Edited By: |

Updated on:Dec 05, 2020 | 10:44 AM

Share

ಬೆಂಗಳೂರು: ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್‌ಗೆ ಯಾರೂ ಅನುಮತಿಯನ್ನು ಕೇಳಿಲ್ಲ. ನಾವು ಕರ್ನಾಟಕ ಬಂದ್‌ಗೆ ಅನುಮತಿಯನ್ನೂ ಕೊಟ್ಟಿಲ್ಲ ಎಂದಿದ್ದಾರೆ. ನಾಳೆ ಬೆಂಗಳೂರಲ್ಲಿ ಯಾವುದೇ ಱಲಿಗೆ ಅವಕಾಶ ಕೊಟ್ಟಿಲ್ಲ. ನಾಳೆ ಎಂದಿನಂತೆ ಜನಜೀವನ ಇರಲಿದೆ. ಹೀಗಾಗಿ ಬಂದ್ ಬಗ್ಗೆ ಭಯ ಬೇಡ. ಯಾರಾದರೂ ಚೇಷ್ಟೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ. ರೌಡಿಶೀಟರ್‌ಗಳ ಪಟ್ಟಿ ಮಾಡಿದ್ದೇವೆ, ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಭದ್ರತೆಗಾಗಿ ಸಿದ್ಧರಿದ್ದಾರೆ 15 ಸಾವಿರ ಪೊಲೀಸರು: ಇನ್ನು ನಾಳೆ ಅನಾವಶ್ಯಕವಾಗಿ ಬಂದ್ ಮಾಡಲು ಕೆಲವರು ನಾನಾ ಪ್ಲಾನ್​ಗಳನ್ನ ಮಾಡ್ತಾರೆ. ಈ ವೇಳೆ ಬೆಂಕಿ ಹಚ್ಚುವುದಂತಹ ದುರ್ಘಟನೆಗಳು ಸಂಭವಿಸಬಹುದು ಹೀಗಾಗಿ ಪೊಲೀಸರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹೊಯ್ಸಳ, ಡಿಸಿಪಿಗಳು ಸಿಟಿ ರೌಂಡ್ಸ್‌ನಲ್ಲಿ ಇರುತ್ತಾರೆ. 33 KSRP, 32 ಸಿಎಆರ್ ತುಕಡಿಗಳನ್ನು ನಿಯೋಜಿಸಿದ್ದಾರೆ.

Published On - 2:00 pm, Fri, 4 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ