AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2020: ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳ ಕೋಚ್​ಗಳಿಗೂ ನಗದು ಬಹಮಾನ ನೀಡುವ ಘೋಷಣೆ ಮಾಡಿದ ಐಒಎ

ಒಲಂಪಿಕ್ಸ್​ನಲ್ಲಿ ಪದಕಗಳನ್ನು ಗೆಲ್ಲುವ ಮಟ್ಟಕ್ಕೆ ಕ್ರೀಡಾಪಟುವನ್ನು ಕೋಚ್​ಗಳು ಹುರಿಗೊಳಿಸುವುದರಿಂದ ಅವರೂ ಸಹ ಬಹಮಾನ ಮತ್ತು ಪ್ರೋತ್ಸಾಹಕ್ಕೆ ಅರ್ಹರಾಗಿರುತ್ತಾರೆ. ಅಥ್ಲೀಟ್​ಗಳನ್ನು ತಯಾರು ಮಾಡಲು ಕೋಚ್​ಗಳು ಹಗಲು ರಾತ್ರಿ ಶ್ರಮಪಡುತ್ತಾರೆ.

Tokyo Olympics 2020: ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳ ಕೋಚ್​ಗಳಿಗೂ ನಗದು ಬಹಮಾನ ನೀಡುವ ಘೋಷಣೆ ಮಾಡಿದ ಐಒಎ
ಕೋಚ್​ಗಳೊಂದಿಗೆ ಮೀರಾಬಾಯಿ ಚಾನು
TV9 Web
| Edited By: |

Updated on: Jul 24, 2021 | 10:16 PM

Share

ಭಾರತದ ಕ್ರೀಡಾಪಟುಗಳು ಒಲಂಪಿಕ್ಸ್​ನಲ್ಲಿ ಪದಕ ಗೆದ್ದರೆ ಕೇವಲ ಅವರ ಬ್ಯಾಂಕ್ ಬ್ಯಾಲೆನ್ಸ್ ಮಾತ್ರ ಉಬ್ಬುವುದಿಲ್ಲ, ಅವರನ್ನು ಆ ಹಂತಕ್ಕೆ ತಯಾರು ಮಾಡಿದ ತರಬೇತುದಾರರು ಮತ್ತು ಕೋಚ್​ಗಳು ಸಹ ನಗದು ಇನಾಮು ಪಡೆಯಲಿದ್ದಾರೆ. ಶನಿವಾರದಂದು ಮಹಿಳೆಯರು ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ನಿರ್ಮಿಸಿ ದ ಮೀರಾಬಾಯಿ ಚಾನು ಅವರ ಕೋಚ್ ವಿಜಯ ಶರ್ಮ ಅವರಿಗೆ 10 ಲಕ್ಷ ರೂ. ಗಳ ಬಹುಮಾನ ನೀಡುವ ಘೋಡಣೆಯನ್ನು ಭಾರತೀಯ ಒಲಂಪಿಕ್ ಸಂಸ್ಥೆ (ಐಒಎ) ಮಾಡಿದೆ. ಸಂಸ್ಥೆ ಮಾಡಿರುವ ಘೋಷಣೆ ಪ್ರಕಾರ ಚಿನ್ನದ ಪದಕೆ ಗೆಲ್ಲುವ ಕ್ರೀಡಾಪಟುವಿನ ಕೋಚ್​ ರೂ. 12.5 ಲಕ್ಷಗಳನ್ನು ಬಹುಮಾನ ಪಡೆಯಲಿದ್ದಾರೆ ಮತ್ತು ಕಂಚಿನ ಪದಕ ಗೆಲ್ಲುವ ಅಥ್ಲೀಟ್​ನ ಕೋಚ್​ ರೂ.7.5 ಲಕ್ಷ ನಗದನ್ನು ರಿವಾರ್ಡ್​ ಆಗಿ ಪಡೆಯಲಿದ್ದಾರೆ.

ಒಲಂಪಿಕ್ಸ್​ನಲ್ಲಿ ಪದಕಗಳನ್ನು ಗೆಲ್ಲುವ ಮಟ್ಟಕ್ಕೆ ಕ್ರೀಡಾಪಟುವನ್ನು ಕೋಚ್​ಗಳು ಹುರಿಗೊಳಿಸುವುದರಿಂದ ಅವರೂ ಸಹ ಬಹಮಾನ ಮತ್ತು ಪ್ರೋತ್ಸಾಹಕ್ಕೆ ಅರ್ಹರಾಗಿರುತ್ತಾರೆ. ಅಥ್ಲೀಟ್​ಗಳನ್ನು ತಯಾರು ಮಾಡಲು ಕೋಚ್​ಗಳು ಹಗಲು ರಾತ್ರಿ ಶ್ರಮಪಡುತ್ತಾರೆ. ಅಥ್ಲೀಟ್​ಗಳಂತೆ ಅವರು ಸಹ ತ್ಯಾಗಗಳನ್ನು ಮಾಡಬೇಕಾಗುತ್ತದೆ,’ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಹೇಳಿದ್ದಾರೆ.

ಟೊಕಿಯೋ ಒಲಂಪಿಕ್ಸ್​​ನಲ್ಲಿ ಸ್ವರ್ಣ ಪದಕೆ ಗೆಲ್ಲುವ ಅಥ್ಲೀಟ್​ಗೆ ರೂ. 75 ಲಕ್ಷ ನೀಡುವುದಾಗಿ ಐಒಎ ಗುರುವಾರದಂದು ಹೇಳಿತ್ತು. ಅದಲ್ಲದೆ ಚಿನ್ನದ ಪದಕ ಗೆಲ್ಲುವ ಕ್ರೀಡಾಪಟು ಪ್ರತಿನಿಧಿಸುವ ಕ್ರೀಡಾ ಸಂಸ್ಥೆಗಳಿಗೆ (ರಾಷ್ಟ್ರೀಯ ಕ್ರೀಡಾ ಒಕ್ಕೂಟ, ಎನ್​ಎಸ್​ಎಫ್) ಬೋನಸ್ ರೂಪದಲ್ಲಿ ರೂ. 25 ಲಕ್ಷ ನೀಡುವ ಘೋಷಣೆ ಯನ್ನೂ ಅದು ಮಾಡಿತ್ತು.

ಟೊಕಿಯೋ ಒಲಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆಲ್ಲುವವರಿಗೆ ರೂ. 40 ಲಕ್ಷ ಮತ್ತು ಕಂಚಿನ ಪದಕ ಗೆಲ್ಲುವವರಿಗೆ ರೂ. 25 ಲಕ್ಷ ನೀಡುವ ಘೋಷಣೆಯನ್ನೂ ಐಒಎ ಮಾಡಿದೆ. ಹಾಗೆಯೇ, ಈ ಒಲಂಪಿಕ್ಸ್​ನಲ್ಲಿ ಬಾಗವಹಿಸಿರುವ ಪ್ರತಿಯೊಬ್ಬ ಅಥ್ಲೀಟ್​ಗೆ ರೂ. 1ಲಕ್ಷ ಮತ್ತು ಪದಕ ಗೆಲ್ಲುವ ಎನ್​ಎಸ್​ಎಫ್​ಗಳಿಗೆ ರೂ. 30 ಲಕ್ಷ ನೀಡುವುದಾಗಿ ಐಒಎ ಹೇಳಿದೆ.

ಇದನ್ನೂ ಓದಿ: ನನಗೆ ಅದೆಷ್ಟು ಸಂತೋಷವಾಗ್ತಿದೆ ಅಂದ್ರೆ, ಹೇಳೋಕೆ ಪದಗಳೇ ಸಾಕಾಗ್ತಿಲ್ಲ: ಟೊಕಿಯೊದಲ್ಲಿ ಪದಕ ಗೆದ್ದ ಮೀರಾಬಾಯಿ ಚಾನು

ಇದನ್ನೂ ಓದಿ: ಟೊಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿರುವ ಭಾರತೀಯರು ಮತ್ತು ಅವರು ಪ್ರತಿನಿಧಿಸಲಿರುವ ಕ್ರೀಡೆಯ ವಿವರ ಇಲ್ಲಿದೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು