AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ. ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ […]

ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ
ಸಾಧು ಶ್ರೀನಾಥ್​
|

Updated on: Feb 26, 2020 | 12:20 PM

Share

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ.

ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ.

ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ ಅಂತಾ ಜಗದೀಶ್ ಪ್ರಶ್ನೆ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದು ಟೋಲ್ ಗೇಟ್ ಸಿಬ್ಬಂದಿ ಚಾಲಕನ ಮುಖ ಹಾಗೂ ಹೊಟ್ಟೆಗೆ ಹೊಡೆದು ಗಾಯಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರೂ ಸಹ ಜಗದೀಶ್ ಮೇಲೆ ಹಲ್ಲೆ ಮಾಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಜಗದೀಶ್​ಗೆ ಪೊಲೀಸರು ಹಾಗೂ BETL ಸಿಬ್ಬಂದಿ ಥಳಿಸಿದ್ದಾರೆ. ಡ್ರೈವರ್ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಿನ್ನೆ ಬೆಳಗ್ಗೆ 11.30‌ರ ಸುಮಾರಿಗೆ ನಡಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ