ಧಾರಾಕಾರ ಮಳೆ: ಶುಶ್ರೂಷಕರ ವಸತಿ ಗೃಹಗಳಿಗೆ ನುಗ್ಗಿದ ನೀರು, ಯಾವೂರಲ್ಲಿ?

ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ತಡರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮದಿಂದಾಗಿ ಉಗರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದ ಸಿಬ್ಬಂದಿಗಳು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹ ಈಗಾಗಲೇ ಶಿಥಿಲಾವಸ್ಥೆ ತಲುಪಿದ್ದು, ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ನೀರು ಹೊರಹಾಕಲು ಸಿಬ್ಬಂದಿ ಕಷ್ಟಪಡುವಂತಾಯಿತು. ಧಾರಾಕಾರ […]

ಧಾರಾಕಾರ ಮಳೆ: ಶುಶ್ರೂಷಕರ ವಸತಿ ಗೃಹಗಳಿಗೆ ನುಗ್ಗಿದ ನೀರು, ಯಾವೂರಲ್ಲಿ?
ಸಾಧು ಶ್ರೀನಾಥ್​

Updated on: Sep 07, 2020 | 11:15 AM

ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ತಡರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮದಿಂದಾಗಿ ಉಗರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದ ಸಿಬ್ಬಂದಿಗಳು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹ ಈಗಾಗಲೇ ಶಿಥಿಲಾವಸ್ಥೆ ತಲುಪಿದ್ದು, ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ನೀರು ಹೊರಹಾಕಲು ಸಿಬ್ಬಂದಿ ಕಷ್ಟಪಡುವಂತಾಯಿತು.

ಧಾರಾಕಾರ ಮಳೆಯಿಂದಾಗಿ ಉಗರಗೋಳದಲ್ಲಿರುವ ಕೆರೆ ಭರ್ತಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಜೊತೆಗೆ ಗೋಕಾಕ್ ತಾಲೂಕಿನ ಕಪ್ರಟ್ಟಿ ಗ್ರಾಮದ ಜಮೀನುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಗೋವಿನ ಜೋಳ ಬೆಳೆ ಹಾನಿಗೊಳಗಾಗಿದೆ.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us