AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು ಇದೀಗ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದಿದ್ದಾರೆ.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’
ಸಾಂದರ್ಭಿಕ ಚಿತ್ರ
Skanda
|

Updated on:Dec 13, 2020 | 4:01 PM

Share

ಬೆಂಗಳೂರು: ವಂಡರ್​ ಲಾ ಅಮ್ಯೂಸ್​​ಮೆಂಟ್ ಪಾರ್ಕ್​ ಇಂದು ಏಕಾಏಕಿ ಬಂದ್​ ಆಗಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್​​ಮೆಂಟ್ ಪಾರ್ಕಿಗೆ ರಜೆಯ ಮಜಾ ಅನುಭವಿಸಲೆಂದು ದೂರದೂರಿನಿಂದ ಬಂದ ಪ್ರವಾಸಿಗರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ದೂರದ ಊರುಗಳಿಂದ ಬಂದಿರೋ ಪ್ರವಾಸಿಗರು ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್​ ಕಾದಿರಿಸಿದ್ದರು. ಆದರೆ, ಮಧ್ಯರಾತ್ರಿಯ ವೇಳೆ ಏಕಾಏಕಿ ಟಿಕೆಟ್​ ರದ್ದು ಮಾಡಿದ ಆಡಳಿತ ಮಂಡಳಿ ಇಂದು ವಂಡರ್​ ಲಾ ಇರುವುದಿಲ್ಲ ಎಂದು ಹೇಳಿದೆ. ಒಟ್ಟು 12,000 ಮಂದಿಯಿಂದ ಬುಕಿಂಗ್ ಪಡೆದಿದ್ದ ವಂಡರ್​ ಲಾ ಈಗ 2,000 ಜನರನ್ನ ಮಾತ್ರ ಒಳಗೆ ಬಿಟ್ಟಿದೆ ಎನ್ನಲಾಗುತ್ತಿದೆ. ಉಳಿದ 10,000 ಮಂದಿಗೆ ಟಿಕೆಟ್​ಗೆ ಪಾವತಿಸಿದ್ದ ಹಣವನ್ನು ಸಹ ಹಿಂದಿರುಗಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು, ಹಣ ಹಿಂದಿರುಗಿಸುವಂತೆ ಪಟ್ಟುಹಿಡಿದಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಲಕಾಲ ಸ್ಥಳದಲ್ಲಿ ಬಿಗು ವಾತಾವರಣ ಸೃಷ್ಟಿಯಾಗಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್​ ಮಾಡಲಾಗಿದೆ ಎಂದು ವರದಿಯಾಗಿದೆ.

ಹುಲಿಯನ್ನು ಅಟ್ಟಾಡಿಸಿಕೊಂಡು ಓಡಿಸಿದ ಆನೆ: ಪ್ರವಾಸಿಗರ ಕ್ಯಾಮೆರಾದಲ್ಲಿ ಅಪರೂಪದ ದೃಶ್ಯ ಸೆರೆ

Published On - 12:50 pm, Sun, 13 December 20

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ