AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು ಇದೀಗ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದಿದ್ದಾರೆ.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’
ಸಾಂದರ್ಭಿಕ ಚಿತ್ರ
Skanda
|

Updated on:Dec 13, 2020 | 4:01 PM

Share

ಬೆಂಗಳೂರು: ವಂಡರ್​ ಲಾ ಅಮ್ಯೂಸ್​​ಮೆಂಟ್ ಪಾರ್ಕ್​ ಇಂದು ಏಕಾಏಕಿ ಬಂದ್​ ಆಗಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್​​ಮೆಂಟ್ ಪಾರ್ಕಿಗೆ ರಜೆಯ ಮಜಾ ಅನುಭವಿಸಲೆಂದು ದೂರದೂರಿನಿಂದ ಬಂದ ಪ್ರವಾಸಿಗರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ದೂರದ ಊರುಗಳಿಂದ ಬಂದಿರೋ ಪ್ರವಾಸಿಗರು ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್​ ಕಾದಿರಿಸಿದ್ದರು. ಆದರೆ, ಮಧ್ಯರಾತ್ರಿಯ ವೇಳೆ ಏಕಾಏಕಿ ಟಿಕೆಟ್​ ರದ್ದು ಮಾಡಿದ ಆಡಳಿತ ಮಂಡಳಿ ಇಂದು ವಂಡರ್​ ಲಾ ಇರುವುದಿಲ್ಲ ಎಂದು ಹೇಳಿದೆ. ಒಟ್ಟು 12,000 ಮಂದಿಯಿಂದ ಬುಕಿಂಗ್ ಪಡೆದಿದ್ದ ವಂಡರ್​ ಲಾ ಈಗ 2,000 ಜನರನ್ನ ಮಾತ್ರ ಒಳಗೆ ಬಿಟ್ಟಿದೆ ಎನ್ನಲಾಗುತ್ತಿದೆ. ಉಳಿದ 10,000 ಮಂದಿಗೆ ಟಿಕೆಟ್​ಗೆ ಪಾವತಿಸಿದ್ದ ಹಣವನ್ನು ಸಹ ಹಿಂದಿರುಗಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು, ಹಣ ಹಿಂದಿರುಗಿಸುವಂತೆ ಪಟ್ಟುಹಿಡಿದಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಲಕಾಲ ಸ್ಥಳದಲ್ಲಿ ಬಿಗು ವಾತಾವರಣ ಸೃಷ್ಟಿಯಾಗಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್​ ಮಾಡಲಾಗಿದೆ ಎಂದು ವರದಿಯಾಗಿದೆ.

ಹುಲಿಯನ್ನು ಅಟ್ಟಾಡಿಸಿಕೊಂಡು ಓಡಿಸಿದ ಆನೆ: ಪ್ರವಾಸಿಗರ ಕ್ಯಾಮೆರಾದಲ್ಲಿ ಅಪರೂಪದ ದೃಶ್ಯ ಸೆರೆ

Published On - 12:50 pm, Sun, 13 December 20

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!