AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು ಇದೀಗ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದಿದ್ದಾರೆ.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’
ಸಾಂದರ್ಭಿಕ ಚಿತ್ರ
Skanda
|

Updated on:Dec 13, 2020 | 4:01 PM

Share

ಬೆಂಗಳೂರು: ವಂಡರ್​ ಲಾ ಅಮ್ಯೂಸ್​​ಮೆಂಟ್ ಪಾರ್ಕ್​ ಇಂದು ಏಕಾಏಕಿ ಬಂದ್​ ಆಗಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್​​ಮೆಂಟ್ ಪಾರ್ಕಿಗೆ ರಜೆಯ ಮಜಾ ಅನುಭವಿಸಲೆಂದು ದೂರದೂರಿನಿಂದ ಬಂದ ಪ್ರವಾಸಿಗರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ದೂರದ ಊರುಗಳಿಂದ ಬಂದಿರೋ ಪ್ರವಾಸಿಗರು ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್​ ಕಾದಿರಿಸಿದ್ದರು. ಆದರೆ, ಮಧ್ಯರಾತ್ರಿಯ ವೇಳೆ ಏಕಾಏಕಿ ಟಿಕೆಟ್​ ರದ್ದು ಮಾಡಿದ ಆಡಳಿತ ಮಂಡಳಿ ಇಂದು ವಂಡರ್​ ಲಾ ಇರುವುದಿಲ್ಲ ಎಂದು ಹೇಳಿದೆ. ಒಟ್ಟು 12,000 ಮಂದಿಯಿಂದ ಬುಕಿಂಗ್ ಪಡೆದಿದ್ದ ವಂಡರ್​ ಲಾ ಈಗ 2,000 ಜನರನ್ನ ಮಾತ್ರ ಒಳಗೆ ಬಿಟ್ಟಿದೆ ಎನ್ನಲಾಗುತ್ತಿದೆ. ಉಳಿದ 10,000 ಮಂದಿಗೆ ಟಿಕೆಟ್​ಗೆ ಪಾವತಿಸಿದ್ದ ಹಣವನ್ನು ಸಹ ಹಿಂದಿರುಗಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು, ಹಣ ಹಿಂದಿರುಗಿಸುವಂತೆ ಪಟ್ಟುಹಿಡಿದಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಲಕಾಲ ಸ್ಥಳದಲ್ಲಿ ಬಿಗು ವಾತಾವರಣ ಸೃಷ್ಟಿಯಾಗಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್​ ಮಾಡಲಾಗಿದೆ ಎಂದು ವರದಿಯಾಗಿದೆ.

ಹುಲಿಯನ್ನು ಅಟ್ಟಾಡಿಸಿಕೊಂಡು ಓಡಿಸಿದ ಆನೆ: ಪ್ರವಾಸಿಗರ ಕ್ಯಾಮೆರಾದಲ್ಲಿ ಅಪರೂಪದ ದೃಶ್ಯ ಸೆರೆ

Published On - 12:50 pm, Sun, 13 December 20

Follow Us
Skanda
Skanda
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ