AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು ಇದೀಗ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದಿದ್ದಾರೆ.

ಆನ್​ಲೈನ್​ ಟಿಕೆಟ್​ ಏಕಾಏಕಿ ರದ್ದು, ರಜೆಯ ಮೂಡ್​ನಲ್ಲಿದ್ದ ಪ್ರವಾಸಿಗರಿಗೆ ವಂಡರ್​ ‘ಲಾಸ್’
ಸಾಂದರ್ಭಿಕ ಚಿತ್ರ
Skanda
|

Updated on:Dec 13, 2020 | 4:01 PM

Share

ಬೆಂಗಳೂರು: ವಂಡರ್​ ಲಾ ಅಮ್ಯೂಸ್​​ಮೆಂಟ್ ಪಾರ್ಕ್​ ಇಂದು ಏಕಾಏಕಿ ಬಂದ್​ ಆಗಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್​​ಮೆಂಟ್ ಪಾರ್ಕಿಗೆ ರಜೆಯ ಮಜಾ ಅನುಭವಿಸಲೆಂದು ದೂರದೂರಿನಿಂದ ಬಂದ ಪ್ರವಾಸಿಗರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ದೂರದ ಊರುಗಳಿಂದ ಬಂದಿರೋ ಪ್ರವಾಸಿಗರು ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್​ ಕಾದಿರಿಸಿದ್ದರು. ಆದರೆ, ಮಧ್ಯರಾತ್ರಿಯ ವೇಳೆ ಏಕಾಏಕಿ ಟಿಕೆಟ್​ ರದ್ದು ಮಾಡಿದ ಆಡಳಿತ ಮಂಡಳಿ ಇಂದು ವಂಡರ್​ ಲಾ ಇರುವುದಿಲ್ಲ ಎಂದು ಹೇಳಿದೆ. ಒಟ್ಟು 12,000 ಮಂದಿಯಿಂದ ಬುಕಿಂಗ್ ಪಡೆದಿದ್ದ ವಂಡರ್​ ಲಾ ಈಗ 2,000 ಜನರನ್ನ ಮಾತ್ರ ಒಳಗೆ ಬಿಟ್ಟಿದೆ ಎನ್ನಲಾಗುತ್ತಿದೆ. ಉಳಿದ 10,000 ಮಂದಿಗೆ ಟಿಕೆಟ್​ಗೆ ಪಾವತಿಸಿದ್ದ ಹಣವನ್ನು ಸಹ ಹಿಂದಿರುಗಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು, ಹಣ ಹಿಂದಿರುಗಿಸುವಂತೆ ಪಟ್ಟುಹಿಡಿದಿದ್ದಾರೆ. ಆನ್​ಲೈನ್​ ಟಿಕೆಟ್​ ಬುಕ್​ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಲಕಾಲ ಸ್ಥಳದಲ್ಲಿ ಬಿಗು ವಾತಾವರಣ ಸೃಷ್ಟಿಯಾಗಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್​ ಮಾಡಲಾಗಿದೆ ಎಂದು ವರದಿಯಾಗಿದೆ.

ಹುಲಿಯನ್ನು ಅಟ್ಟಾಡಿಸಿಕೊಂಡು ಓಡಿಸಿದ ಆನೆ: ಪ್ರವಾಸಿಗರ ಕ್ಯಾಮೆರಾದಲ್ಲಿ ಅಪರೂಪದ ದೃಶ್ಯ ಸೆರೆ

Published On - 12:50 pm, Sun, 13 December 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ