ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ […]

ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ

Updated on: Feb 08, 2020 | 11:22 AM

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ ಟೋಲ್ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Published On - 6:50 pm, Fri, 7 February 20