AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ತಂದ ಅವಾಂತರ: ಗುಂಡಿಯಲ್ಲಿ ಸಿಲುಕಿದ ಟ್ರ್ಯಾಕ್ಟರ್, ಗ್ರಾಮಸ್ಥರ ಹರಸಾಹಸ

ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಇದರಿಂದ ಅನೇಕ ಅನಾಹುತಗಳು ಎದುರಾಗುತ್ತಿವೆ. ಚಳ್ಳಕೆರೆ ತಾಲೂಕಿನ ಚಿಗತನಹಳ್ಳಿಯಲ್ಲಿ ನೀರಿನ ರಭಸಕ್ಕೆ ದಿಕ್ಕುತಪ್ಪಿ ಚಲಿಸಿದ ಟ್ರ್ಯಾಕ್ಟರ್, ಗುಂಡಿಯಲ್ಲಿ ಸಿಲುಕಿಕೊಂಡಿದ ಘಟನೆ ನಡೆದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ರಸ್ತೆಯೂ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ತುಂಬಿ‌ ಹರಿಯುವ ಹಳ್ಳದಲ್ಲಿ ಟ್ರ್ಯಾಕ್ಟರ್ ಸಿಲುಕಿದೆ. ತುಂಬಿ‌ ಹರಿಯುತ್ತಿರುವ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಚಾಲಕ ಅವಾಂತರಕ್ಕೆ ಸಿಕ್ಕಿ ಹಾಕಿಕೊಂಡಿದ್ದಾನೆ. ಅದೃಷ್ಟವಶಾತ್ ಟ್ರ್ಯಾಕ್ಟರ್‌ನಲ್ಲಿದ್ದ‌ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ.

ಮಳೆ ತಂದ ಅವಾಂತರ: ಗುಂಡಿಯಲ್ಲಿ ಸಿಲುಕಿದ ಟ್ರ್ಯಾಕ್ಟರ್, ಗ್ರಾಮಸ್ಥರ ಹರಸಾಹಸ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 10, 2020 | 10:23 AM

Share

ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಇದರಿಂದ ಅನೇಕ ಅನಾಹುತಗಳು ಎದುರಾಗುತ್ತಿವೆ. ಚಳ್ಳಕೆರೆ ತಾಲೂಕಿನ ಚಿಗತನಹಳ್ಳಿಯಲ್ಲಿ ನೀರಿನ ರಭಸಕ್ಕೆ ದಿಕ್ಕುತಪ್ಪಿ ಚಲಿಸಿದ ಟ್ರ್ಯಾಕ್ಟರ್, ಗುಂಡಿಯಲ್ಲಿ ಸಿಲುಕಿಕೊಂಡಿದ ಘಟನೆ ನಡೆದಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ರಸ್ತೆಯೂ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ತುಂಬಿ‌ ಹರಿಯುವ ಹಳ್ಳದಲ್ಲಿ ಟ್ರ್ಯಾಕ್ಟರ್ ಸಿಲುಕಿದೆ. ತುಂಬಿ‌ ಹರಿಯುತ್ತಿರುವ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಚಾಲಕ ಅವಾಂತರಕ್ಕೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಅದೃಷ್ಟವಶಾತ್ ಟ್ರ್ಯಾಕ್ಟರ್‌ನಲ್ಲಿದ್ದ‌ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ.