
ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಇದರಿಂದ ಅನೇಕ ಅನಾಹುತಗಳು ಎದುರಾಗುತ್ತಿವೆ. ಚಳ್ಳಕೆರೆ ತಾಲೂಕಿನ ಚಿಗತನಹಳ್ಳಿಯಲ್ಲಿ ನೀರಿನ ರಭಸಕ್ಕೆ ದಿಕ್ಕುತಪ್ಪಿ ಚಲಿಸಿದ ಟ್ರ್ಯಾಕ್ಟರ್, ಗುಂಡಿಯಲ್ಲಿ ಸಿಲುಕಿಕೊಂಡಿದ ಘಟನೆ ನಡೆದಿದೆ.
ಅದೃಷ್ಟವಶಾತ್ ಟ್ರ್ಯಾಕ್ಟರ್ನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ.