Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ. ಈ ಎಲ್ಲಾ ರಸ್ತೆಗಳಲ್ಲಿ […]

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್
Edited By:

Updated on: Jul 22, 2020 | 5:21 PM

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ.

ಈ ಎಲ್ಲಾ ರಸ್ತೆಗಳಲ್ಲಿ ಏಕಮುಖ ಮಾರ್ಗ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗುವುದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಇದರಿಂದ ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ.

Published On - 5:22 pm, Tue, 21 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us