AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಿಂದ ಹೊರಡುವಾಗ ರಾಜಧಾನಿ ಜನರೇ ಎಚ್ಚರ.. ಎಲ್ಲೆಲ್ಲಿ ಸಾರಿಗೆ ಪ್ರತಿಭಟನೆ ಬಿಸಿ ಹೇಗಿದೆ?

ಸದ್ಯ ಸರ್ಕಾರದ ಪರಿಸ್ಥಿತಿ ಸರಿ ಇಲ್ಲ. ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತದೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಮುಷ್ಕರ ಬಿಟ್ಟು ಕೆಲಸಕ್ಕೆ ಹೊರಡಿ ಎಂದು ಸಾರಿಗೆ ನೌಕರರಿಗೆ ಬಿಎಸ್​ವೈ ವಿನಂತಿಸಿಕೊಂಡಿದ್ದಾರೆ.

ಮನೆಯಿಂದ ಹೊರಡುವಾಗ ರಾಜಧಾನಿ ಜನರೇ ಎಚ್ಚರ.. ಎಲ್ಲೆಲ್ಲಿ ಸಾರಿಗೆ ಪ್ರತಿಭಟನೆ ಬಿಸಿ ಹೇಗಿದೆ?
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Follow us
shruti hegde
|

Updated on:Dec 11, 2020 | 11:09 AM

ಬೆಂಗಳೂರು: ಇಂದು ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳು ರಸ್ತೆಗೆ ಇಳಿದಿಲ್ಲ. ನಮ್ಮ ಬೇಡಿಕೆಗಳನ್ನ ಪೂರೈಸಿ ಎಂದು  ಸರ್ಕಾರದ ವಿರುದ್ಧ ಪ್ರತಿಭಟನೆ  ನಡೆಸುತ್ತಿದ್ದಾರೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ:

ಬಸ್​ಗಳು ಇಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಕೆಲಸಕ್ಕೆ ಹೋಗುವವರಿಂದ ಹಿಡಿದು ವಯಸ್ಕರವರೆಗೆ ಬಸ್​ಗಾಗಿ ಕಾಯುತ್ತಾ ಬಸ್​ಸ್ಟಾಪ್​ಗಳಲ್ಲಿ ನಿಂತಿದ್ದಾರೆ. ಒಂದೇ ಒಂದು ಬಸ್​ ಕೂಡಾ ಇಲ್ಲದಂತಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದಾರೆ.

ಸರ್ಕಾರ ಸ್ಪಂದಿಸದಿದ್ರೆ ಪ್ರೀಡಂ ಪಾರ್ಕ್​ಗೆ ತೆರಳುತ್ತೇವೆ:

ಸರ್ಕಾರ ಸ್ಪಂದಿಸದಿದ್ರೆ ಡಿಪೋ ಬಿಟ್ಟು ಫ್ರೀಡಂ ಪಾರ್ಕ್ ತೆರಳುತ್ತೇವೆ ಎಂದು ನೌಕರರ ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಪೋಗಳ ಮುಂಭಾಗದಲ್ಲಿ ಬಸ್ ನಿಲ್ಲಸಿ ಬಂದ್ ಮಾಡಿದ್ದಾರೆ ನೌಕರರು. ಇವಾಗ ಬಸ್ ಬರುತ್ತೆ ಅಂತ ಪ್ರಯಾಣಿಕರೆಲ್ಲಾ ಬಸ್​ಸ್ಟಾಪ್​ಗಳಲ್ಲಿ ಕಾದು ಕುಳಿತಿದ್ದಾರೆ. ಬಸ್​ಗಳು ಮಾತ್ರ ಬರ್ತಾನೇ ಇಲ್ಲ.

ಬೆಳಗ್ಗೆ ಕೆಲಸಕ್ಕೆ ಹೋಗುವವರಿಂದ ಹಿಡಿದು, ವಯಸ್ಸಾದವರು, ಮಕ್ಕಳು, ಯುವಕರು ಸೇರಿದಂತೆ ಮಹಿಳೆಯರು ಬಸ್​ಗಾಗಿ ಕಾಯ್ತಾ ಇದ್ದಾರೆ. ಬೆಂಗಳೂರು ಮೆಜೆಸ್ಟಿಕ್ ತುಂಬ ಜನರೇ ಜನರು. ಆದ್ರೂ ಕೂಡಾ ಬಿಎಂಟಿಸಿ ಬಸ್​ಗಳು ಮಾತ್ರ ಬಿಲ್​ಕುಲ್ ಹೊರಡಲ್ಲ ಅಂತ ಕೂತು ಬಿಟ್ಟಿದ್ದಾರೆ.

ಬಿಎಸ್​ವೈ ವಿನಂತಿ:

ಸದ್ಯ ಸರ್ಕಾರದ ಪರಿಸ್ಥಿತಿ ಸರಿ ಇಲ್ಲ. ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತದೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಮುಷ್ಕರ ಬಿಟ್ಟು ಕೆಲಸಕ್ಕೆ ಹೊರಡಿ ಎಂದು ಸಾರಿಗೆ ನೌಕರರಿಗೆ ಬಿಎಸ್​ವೈ ವಿನಂತಿಸಿಕೊಂಡಿದ್ದಾರೆ.

ಎಲ್ಲೆಲ್ಲಿ ಸಾರಿಗೆ ಪ್ರತಿಭಟನೆ:

ದಾವಣಗೆರೆ, ರಾಮನಗರ, ಗದಗ, ಚಾಮರಾಜ ನಗರ, ಮಂಡ್ಯ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಬಸ್​ಗಳು ಸಂಚರಿಸುತ್ತಿಲ್ಲ. ಮಧ್ಯಾಹ್ನ 12 ಗಂಟೆಯ ಒಳಗೆ ಸರ್ಕಾರ ಸ್ಪಂದಿಸಬೇಕು ಎಂದು ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಭೆ ನಡೆಸಿ ಮಾತನಾಡುತ್ತೇವೆ:

ಸಾರಿಗೆ ನೌಕರರಿಗೆ ಇಲ್ಲಿಯವರೆಗೆ ಸಂಬಳದಲ್ಲಿ ಕಡಿತ ಮಾಡಿಲ್ಲ. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡುತ್ತೇನೆ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ

Published On - 9:36 am, Fri, 11 December 20

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ