AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ.. ಇಂದೂ ಕೂಡ ರಸ್ತೆಗೆ ಇಳಿಯುವುದಿಲ್ಲ BMTC, KSRTC

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಇಂದೂ ಕೂಡ KSRTC, BMTC ಬಸ್ ಸಂಚಾರ ಅನುಮಾನವಾಗಿದೆ. ನಿನ್ನೆ ಪೊಲೀಸ್ ಭದ್ರತೆಯಲ್ಲಿ ಬೆರಳೆಣಿಕೆಯಷ್ಟು ಬಸ್ ಸಂಚರಿಸಿದ್ದವು. ಆದರೆ ಇಂದು ಅದೂ ಇಲ್ಲ. ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಇಂದು ರಾಜ್ಯದಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಬೆಂಗಳೂರಿಗರೇ ಎಚ್ಚರ.. ಇಂದೂ ಕೂಡ ರಸ್ತೆಗೆ ಇಳಿಯುವುದಿಲ್ಲ BMTC, KSRTC
ಬಸ್​ಗಾಗಿ ಕಾದು ನಿಂತ ಪ್ರಯಾಣಿಕರು
ಆಯೇಷಾ ಬಾನು
ಆಯೇಷಾ ಬಾನು|

Updated on: Dec 13, 2020 | 7:11 AM

Share

ಬೆಂಗಳೂರು: ಮಣಿಯದ ಸರ್ಕಾರ, ನಿಲ್ಲದ ಸಾರಿಗೆ ನೌಕರರ ಮುಷ್ಕರ. ಉಗ್ರ ಸ್ವರೂಪ ಪಡೆದ ಸಾರಿಗೆ ನೌಕರರ ಪ್ರೊಟೆಸ್ಟ್. ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡಲಿದ್ದಾರೆ. ಇವತ್ತೂ ಸಹ ಬಸ್ ಸಂಚಾರ ಕಂಪ್ಲೀಟ್ ಬಂದ್ ಆಗಲಿದೆ. ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗೆ ಇಳಿಯುವುದಿಲ್ಲ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಇಂದೂ ಕೂಡ KSRTC, BMTC ಬಸ್ ಸಂಚಾರ ಅನುಮಾನವಾಗಿದೆ. ನಿನ್ನೆ ಪೊಲೀಸ್ ಭದ್ರತೆಯಲ್ಲಿ ಬೆರಳೆಣಿಕೆಯಷ್ಟು ಬಸ್ ಸಂಚರಿಸಿದ್ದವು. ಆದರೆ ಇಂದು ಅದೂ ಇಲ್ಲ. ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಇಂದು ರಾಜ್ಯದಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

2 ದಿನ ಬಸ್ ಸಂಚಾರ ನಿಲ್ಲಿಸಿ ರಾಜ್ಯಾದ್ಯಂತ ನೌಕರರು ಮುಷ್ಕರ ಮಾಡಿದ್ದರು. ಆದರೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಲು ಒಪ್ಪದ ಹಿನ್ನೆಲೆಯಲ್ಲಿ ಇಂದು ಪ್ರೊಟೆಸ್ಟ್ ಉಗ್ರ ಸ್ವರೂಪ ಪಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಗೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ. ಆಯಾ ಜಿಲ್ಲೆಗಳ ಡಿಪೋ ಬಳಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. ಇವತ್ತೂ ಬಸ್ ಸಂಚಾರ ಕಂಪ್ಲೀಟ್ ಬಂದ್ ಆಗಲಿದ್ದು ಇಂದು ಕೂಡ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಲಿದೆ. ಪ್ರಯಾಣಿಕರು ದುಪ್ಪಟ್ಟು ಹಣ ನೀಡಿ ಆಟೋ, ಕ್ಯಾಬ್, ಖಾಸಗಿ ಬಸ್​ಗಳ ಮೊರೆ ಹೋಗಬೇಕಿದೆ.

ಇಂದಿನಿಂದ ಸಾರಿಗೆ ಸಿಬ್ಬಂದಿಯ ಉಪವಾಸ ಸತ್ಯಾಗ್ರಹ.. ಇಬ್ಬರ ಹಗ್ಗಜಗ್ಗಾಟದಲ್ಲಿ ಪ್ರಯಾಣಿಕರು ಹೈರಾಣ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ