AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ. ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ […]

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ
ಸಾಧು ಶ್ರೀನಾಥ್​
|

Updated on:Apr 24, 2020 | 12:57 PM

Share

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ.

ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ ಬಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಗ್ಗದ ಸಹಾಯದಿಂದ‌ ಮರದ ಕೊಂಬೆಯನ್ನು ತೆರವುಗೊಳಿಸಿದ್ದಾರೆ.

ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲೂ ಸಹ ಸಣ್ಣ ಮರವೊಂದು ನೆಲಕ್ಕುರುಳಿದೆ. ಯಶವಂತಪುರ ಪೊಲೀಸ್ ಕ್ವಾರ್ಟರ್ಸ್​ ಬಳಿಯೇ ಮರ ಉರುಳಿದ್ದ ಪರಿಣಾಮ ಯಶವಂತಪುರ-ಮೆಜೆಸ್ಟಿಕ್ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.

Published On - 11:38 am, Fri, 24 April 20

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ