ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ. ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ […]

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ
ಸಾಧು ಶ್ರೀನಾಥ್​

Updated on: Apr 24, 2020 | 12:57 PM

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ.

ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ ಬಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಗ್ಗದ ಸಹಾಯದಿಂದ‌ ಮರದ ಕೊಂಬೆಯನ್ನು ತೆರವುಗೊಳಿಸಿದ್ದಾರೆ.

ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲೂ ಸಹ ಸಣ್ಣ ಮರವೊಂದು ನೆಲಕ್ಕುರುಳಿದೆ. ಯಶವಂತಪುರ ಪೊಲೀಸ್ ಕ್ವಾರ್ಟರ್ಸ್​ ಬಳಿಯೇ ಮರ ಉರುಳಿದ್ದ ಪರಿಣಾಮ ಯಶವಂತಪುರ-ಮೆಜೆಸ್ಟಿಕ್ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.

Published On - 11:38 am, Fri, 24 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us