ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರಿಗೆ ಸಂಕಷ್ಟ, ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆ

ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಆದ್ರೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ. ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ(38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ(60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್(47) ಆತ್ಮಹತ್ಯೆಗೆ ಶರಣಾದ ನೇಕಾರರು. ಜವಳಿ ಸಚಿವರಾಗಿ ಶ್ರೀಮಂತ ಪಾಟೀಲ್ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಒಂದೇ […]

ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರಿಗೆ ಸಂಕಷ್ಟ, ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆ
ಸಾಧು ಶ್ರೀನಾಥ್​ Edited By:

Updated on: Jun 09, 2020 | 8:23 AM

ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಆದ್ರೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ.

ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ(38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ(60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್(47) ಆತ್ಮಹತ್ಯೆಗೆ ಶರಣಾದ ನೇಕಾರರು.

ಜವಳಿ ಸಚಿವರಾಗಿ ಶ್ರೀಮಂತ ಪಾಟೀಲ್ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಒಂದೇ ಒಂದು ಸಭೆ ಕೂಡ ಮಾಡಿಲ್ಲ. ಮೂವರ ಸಾವಿನಿಂದಾಗಿ ಮಾನಸಿಕವಾಗಿ ಬೆಳಗಾವಿ ಜಿಲ್ಲೆ ನೇಕಾರರು ಕುಗ್ಗಿಹೋಗಿದ್ದಾರೆ. ಜಿಲ್ಲೆಗೆ ಬಾರದ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us