AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮಹಾ ಎಡವಟ್ಟು: ಕುಟುಂಬಸ್ಥರಿಂದಲೇ ಕೊರೊನಾ ಶಂಕಿತನ ಅಂತ್ಯಸಂಸ್ಕಾರ

ತುಮಕೂರು: ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿ, ಅಮಾನವೀಯ ವರ್ತನೆಯಿಂದಾಗಿ ಈಗ ಒಂದು ಕುಟುಂಬ ಮತ್ತು ಗ್ರಾಮದ ಜನತೆ ಭಯ ಹಾಗೂ ಆತಂಕದಲ್ಲಿರಬೇಕಾದ ಸ್ಥಿತಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ತಿಮ್ಮೇಗೌಡನಪಾಳ್ಯ ಗ್ರಾಮಸ್ಥರಿಗೆ ಎದುರಾಗಿದೆ. ಹೌದು, ಕುಣಿಗಲ್ ತಾಲೂಕಿನ ತಿಮ್ಮೇಗೌಡನಪಾಳ್ಯ ಗ್ರಾಮದಲ್ಲಿ ಜೂನ್‌ 25ರಂದು ಮಹಿಳೆಯೊಬ್ಬಳು ಬೆಂಗಳೂರಿನಿಂದ ಹಿಂದಿರುಗಿದ್ದಳು. ಎರಡು ದಿನಗಳ ನಂತರ ಮಹಿಳೆಗೆ ಜ್ವರ ಕಾಣಿಸಿಕೊಂಡಿದೆ. ಆಗ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಗ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ಮಹಿಳೆಯನ್ನ ಪರೀಕ್ಷಿಸಿ ವಾಪಸ್‌ ಕಳಿಸಿದ್ದಾರೆ. ಇದಾದ ನಂತರ ಜೂನ್ […]

ಮತ್ತೊಂದು ಮಹಾ ಎಡವಟ್ಟು: ಕುಟುಂಬಸ್ಥರಿಂದಲೇ ಕೊರೊನಾ ಶಂಕಿತನ ಅಂತ್ಯಸಂಸ್ಕಾರ
Guru
| Edited By: |

Updated on:Jul 02, 2020 | 12:33 PM

Share

ತುಮಕೂರು: ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿ, ಅಮಾನವೀಯ ವರ್ತನೆಯಿಂದಾಗಿ ಈಗ ಒಂದು ಕುಟುಂಬ ಮತ್ತು ಗ್ರಾಮದ ಜನತೆ ಭಯ ಹಾಗೂ ಆತಂಕದಲ್ಲಿರಬೇಕಾದ ಸ್ಥಿತಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ತಿಮ್ಮೇಗೌಡನಪಾಳ್ಯ ಗ್ರಾಮಸ್ಥರಿಗೆ ಎದುರಾಗಿದೆ.

ಹೌದು, ಕುಣಿಗಲ್ ತಾಲೂಕಿನ ತಿಮ್ಮೇಗೌಡನಪಾಳ್ಯ ಗ್ರಾಮದಲ್ಲಿ ಜೂನ್‌ 25ರಂದು ಮಹಿಳೆಯೊಬ್ಬಳು ಬೆಂಗಳೂರಿನಿಂದ ಹಿಂದಿರುಗಿದ್ದಳು. ಎರಡು ದಿನಗಳ ನಂತರ ಮಹಿಳೆಗೆ ಜ್ವರ ಕಾಣಿಸಿಕೊಂಡಿದೆ. ಆಗ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಗ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ಮಹಿಳೆಯನ್ನ ಪರೀಕ್ಷಿಸಿ ವಾಪಸ್‌ ಕಳಿಸಿದ್ದಾರೆ.

ಇದಾದ ನಂತರ ಜೂನ್ 30ರಂದು ಮಹಿಳೆಯ ಪತಿ ಸಾವನ್ನಪ್ಪಿದ್ದಾನೆ. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಆತನಿಗೆ ಕೊರೊನಾ ಇರೋ ಶಂಕೆ ಇದೆ. ಜತೆಗೆ ಅಧಿಕಾರಿಗಳು ಪತಿ ಸತ್ತ ನಂತರ ಮಹಿಳೆಗೆ ಕೊರೊನಾ‌ ಟೆಸ್ಟ್‌ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆದ್ರೆ ಇದೆಲ್ಲಕ್ಕಿಂತ ಘೋರ ಅಂದ್ರೆ ಸಾವನ್ನಪ್ಪಿದ ವೃದ್ಧನನ್ನ ಅಧಿಕಾರಿಗಳು ಪ್ರೋಟೋಕಾಲ್‌ ಪ್ರಕಾರ ಅಂತ್ಯಕ್ರಿಯೆ ಮಾಡದೇ ಸಂಬಂಧಿಕರಿಗೆ ಪಿಪಿಇ ಕಿಟ್‌ ನೀಡಿ ನಿವೇ ಅಂತ್ಯಕ್ರಿಯೆ ಮಾಡಿ ಎಂದು ಕೈತೊಳೆದುಕೊಂಡಿದ್ದಾರೆ. ಹೀಗಾಗಿ ಮೃತನ ಮಗ ಮತ್ತು ಅಳಿಯ ಪಿಪಿಇ ಕಿಟ್‌ ಧರಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ಇಷ್ಟೇ ಅಲ್ಲ ಗ್ರಾಮದ ಸುಮಾರು ನೂರು ಜನರು ಪಾಲ್ಗೊಂಡಿದ್ದಾರೆ ಎನ್ನಲಾಗ್ತಿದೆ.

Published On - 11:52 am, Thu, 2 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ