AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..

ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಾ ಆರತಿ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..
ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 01, 2020 | 9:56 AM

Share

ಬಳ್ಳಾರಿ: ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರುಗಿತು. ಪ್ರತಿ ತಿಂಗಳು ತುಂಗಭದ್ರಾ ನದಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ಇವತ್ತು ಕೂಡ ತುಂಗಾ ಆರತಿ ಕಾರ್ಯಕ್ರಮ ಜರುಗಿತು.

ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿ, ಆರತಿ ಬೆಳಗಿದರು.

ಈ ವೇಳೆ ಹಂಪಿಗೆ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ತುಂಗಭದ್ರಾ ನದಿಯಲ್ಲಿ ಪುಷ್ಕರ ಸ್ನಾನ ಮಾಡಿ ತುಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನದಿ ದಂಡೆಯ ಮಂಟಪ ಹಾಗೂ ಸ್ನಾನಘಟ್ಟವನ್ನ ವಿದ್ಯುತ್ ದ್ವೀಪಗಳಿಂದ ಅಲಂಕಾರಗೊಳಿಸಲಾಗಿತ್ತು.

ಇದನ್ನೂ ಓದಿ: ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು

Published On - 9:52 am, Tue, 1 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!